ಬ್ರೇಕಿಂಗ್ ನ್ಯೂಸ್
18-03-24 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಿಎಂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿಕೊಂಡಿರುವ ಸಂಸದ ಸದಾನಂದ ಗೌಡ ಬಿಜೆಪಿ ತೊರೆಯುವ ಸಾಧ್ಯತೆ ಕಂಡುಬಂದಿದ್ದು, ಕಾಂಗ್ರೆಸ್ ಸೇರಿ ಮೈಸೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಡಿವಿ ಸದಾನಂದಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ನಾಯಕರು ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಡೀವಿ, ನಾಳೆಯೇ ತನ್ನ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ.
ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, 2011ರಲ್ಲಿ ದಿಢೀರ್ ಆಗಿ ಮುಖ್ಯಮಂತ್ರಿಯಾಗಿದ್ದರು. ಎನ್ಡಿಎ ಸರಕಾರದಲ್ಲಿ ರೈಲು, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಸದಾನಂದಗೌಡ ಕಾರ್ಯ ನಿರ್ವಹಿಸಿದ್ದಾರೆ.
ಈ ಬಾರಿ ಲೋಕಸಭೆ ಚುನಾವಣೆ ಮೊದಲೇ ತನ್ನ ರಾಜಕೀಯ ನಿವೃತ್ತಿ ಬಗ್ಗೆ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಶೋಭಾ ಕರಂದ್ಲಾಜೆಗೆ ಬಿಟ್ಟು ಕೊಟ್ಟಿದ್ದರು. ಇದರಿಂದ ಮುನಿಸಿಕೊಂಡಿದ್ದ ಡಿವಿ ಅವರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿದ್ದಾರೆ. ಹಾಗಿದ್ದರೂ ತಾನೆಂದೂ ಕಾಂಗ್ರೆಸ್ ಸೇರೋದಿಲ್ಲ ಎಂದೇ ಹೇಳುತ್ತಿದ್ದರು. ಕಾಂಗ್ರೆಸ್ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿ ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.
Veteran BJP leader, former Karnataka CM and Union Minister DV Sadananda Gowda may quit the party and contest from Mysuru as Congress candidate. The 72-year old leader is celebrating his birthday today (Monday).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am