ಬ್ರೇಕಿಂಗ್ ನ್ಯೂಸ್
21-03-24 11:41 am HK News Desk ಕರ್ನಾಟಕ
ಶಿವಮೊಗ್ಗ, ಮಾ 21: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದಿನ ಜೂನ್ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ, ನಿಮ್ಮ ಮಗನನ್ನ ಎಂಎಲ್ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡ್ತೀವಿ ಅಂತ ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು, ಬಿಎಸ್ವೈ ಕುಟುಂಬದ ಸರ್ವಾಧಿಕಾರದಿಂದ ಮುಕ್ತವಾಬೇಕು ಎಂಬುದಷ್ಟೇ ಮುಖ್ಯ ಎಂದು ಗುಡುಗಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ, ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ, ನೂರಕ್ಕೆ ನೂರು ನೀವು ಗೆಲ್ಲುತ್ತೀರಾ ಎಂದು ಸ್ವಾಮೀಜಿಗಳು ಹೇಳಿದ್ದಾರೆಂದು ತಿಳಿಸಿದ್ದಾರೆ
ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ, ಸರ್ವಾಧಿಕಾರಿ ಧೋರಣೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ರಾಜ್ಯದಲ್ಲಿ ಈ ಬಾರಿ ಬಿಜೆಪಿ 28 ಸ್ಥಾನ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಗೆದ್ದ ನಂತರ ಬಿಜೆಪಿ ಸೇರುತ್ತೇನೆ ಎಂದು ನುಡಿದಿದ್ದಾರೆ.
Eshwarappa says will make BJP state president Vijayendra resign soon after I win from shivamogga. The entire BJP should be free from this dicator family of B. S. Yediyurappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am