ಬ್ರೇಕಿಂಗ್ ನ್ಯೂಸ್
21-03-24 11:41 am HK News Desk ಕರ್ನಾಟಕ
ಶಿವಮೊಗ್ಗ, ಮಾ 21: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದಿನ ಜೂನ್ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ, ನಿಮ್ಮ ಮಗನನ್ನ ಎಂಎಲ್ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡ್ತೀವಿ ಅಂತ ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು, ಬಿಎಸ್ವೈ ಕುಟುಂಬದ ಸರ್ವಾಧಿಕಾರದಿಂದ ಮುಕ್ತವಾಬೇಕು ಎಂಬುದಷ್ಟೇ ಮುಖ್ಯ ಎಂದು ಗುಡುಗಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ, ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ, ನೂರಕ್ಕೆ ನೂರು ನೀವು ಗೆಲ್ಲುತ್ತೀರಾ ಎಂದು ಸ್ವಾಮೀಜಿಗಳು ಹೇಳಿದ್ದಾರೆಂದು ತಿಳಿಸಿದ್ದಾರೆ
ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ, ಸರ್ವಾಧಿಕಾರಿ ಧೋರಣೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ರಾಜ್ಯದಲ್ಲಿ ಈ ಬಾರಿ ಬಿಜೆಪಿ 28 ಸ್ಥಾನ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಗೆದ್ದ ನಂತರ ಬಿಜೆಪಿ ಸೇರುತ್ತೇನೆ ಎಂದು ನುಡಿದಿದ್ದಾರೆ.
Eshwarappa says will make BJP state president Vijayendra resign soon after I win from shivamogga. The entire BJP should be free from this dicator family of B. S. Yediyurappa.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am