ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.


ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am