ಬ್ರೇಕಿಂಗ್ ನ್ಯೂಸ್
22-03-24 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಪ್ರವೇಶದಿಂದಾಗಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟಿದ್ದ 5, 8 ಮತ್ತು 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ಮುಂದುವರಿಸಲು ರಾಜ್ಯ ಹೈಕೋರ್ಟ್ ದ್ವಿಸದಸ್ಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಪರೀಕ್ಷೆ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ವತಿಯಿಂದ ನಡೆಸುವ ಪರೀಕ್ಷೆಗೆ ಅನುಮತಿ ನೀಡಿರುವುದಲ್ಲದೆ, ಇತರೇ ವಿಷಯಗಳ ಪರೀಕ್ಷೆ ನಡೆಸುವುದಕ್ಕೂ ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.
5, 8 ಮತ್ತು 9ನೇ ತರಗತಿಯ ಉಳಿದಿರುವ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸಲು ಸರ್ಕಾರಕ್ಕೆ ಸೂಚಿಸಿದೆ. ಈಗಾಗಲೇ ಐದನೇ ತರಗತಿಯ ನಾಲ್ಕು ವಿಷಯಗಳ ಪೈಕಿ ಎರಡು ಪರೀಕ್ಷೆ ಮುಗಿದಿದೆ. 8 ಹಾಗೂ 9 ತರಗತಿಗಳ ನಾಲ್ಕು ವಿಷಯಗಳ ಪರೀಕ್ಷೆ ನಡೆದಿದೆ. ಮಾರ್ಚ್ 13ರಂದು ಖಾಸಗಿ ಶಾಲೆಗಳ ಮೇಲ್ಮನವಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ, ಹೈಕೋರ್ಟ್ನಲ್ಲೇ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಲು ಸೂಚಿಸಿತ್ತು. ಅದರಂತೆ, ಹೈಕೋರ್ಟ್ ತೀರ್ಪು ನೀಡಿದ್ದು ತಾವು ಹೇಳಿದ್ದೇ ನಡೆಯಬೇಕೆಂಬ ಖಾಸಗಿ ಶಾಲೆಗಳ ಒಕ್ಕೂಟದ ನಡೆಗೆ ಚಾಟಿ ಬೀಸಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಪಬ್ಲಿಕ್ ಪರೀಕ್ಷೆ ಮಾರ್ಚ್ 11ರಿಂದ ತೊಡಗಿ ಮಾರ್ಚ್ 18ಕ್ಕೆ ಮುಗಿಯಬೇಕಿತ್ತು. ಮಾರ್ಚ್ 12ರಂದು ಹೈಕೋರ್ಟ್ ಬಳಿಕ ಸುಪ್ರೀಂಕೋರ್ಟ್ ಕದ ತಟ್ಟಿ ತಡೆಯಾಜ್ಞೆ ತಂದಿದ್ದರಿಂದ ಪರೀಕ್ಷೆ ಅರ್ಧಕ್ಕೆ ನಿಲ್ಲುವಂತಾಗಿತ್ತು. ಇದರಿಂದ ಶಿಕ್ಷಕರು, ಸಿಬಂದಿ ಜೊತೆಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದರು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವಾಗಲೇ ಇತರ ತರಗತಿಗಳ ಪಬ್ಲಿಕ್ ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
A two-judge bench of the Karnataka High Court has given the green signal to resume the public examinations for classes 5, 8 and 9, which were put on hold midway due to the intervention of a single-judge bench of the High Court. A division bench of the high court upheld the appeal filed against the single-judge bench's order quashing the education department's circular on the examination.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm