ಬ್ರೇಕಿಂಗ್ ನ್ಯೂಸ್
22-03-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 22: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಹೌದು, ಮಂಡ್ಯ ಭಾಗದ ಜೆಡಿಎಸ್ ನ ಮಾಜಿ ಮೂವರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಎಂಎಲ್ ಸಿ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ. ಶ್ರೀನಿವಾಸ್, ಮಾಜಿ ಎಂಎಲ್ ಸಿ ಅಪ್ಪಾಜಿ ಗೌಡ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು ಎಂದರು.


ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಮರಿ ತಿಬ್ಬೇಗೌಡ ಮಾತನಾಡಿ, ಮೈಸೂರು ಚಾಮರಾಜನಗರ, ಹಾಸನ ಮಂಡ್ಯ ಜಿಲ್ಲೆಗಳಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದೇನೆ. ಶಿಕ್ಷಕ ಸಮುದಾಯದ ಹಾಗೂ ಜನರ ಹಿತದೃಷ್ಟಿಯಿಂದ ಜಾತ್ಯತೀತ ನಿಲುವಿನೊಂದಿಗೆ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಬಿಕೆ ಹರಿಪ್ರಸಾದ್, ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ಜೆಡಿಎಸ್ ಮತ್ತು ಹಾಲಿ ಸಂಸದ ಸುಮಲತಾ ಇಬ್ಬರೂ ಈ ಕ್ಷೇತ್ರಕ್ಕೆ ಪಟ್ಟು ಹಿಡಿದಿರುವುದರಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ. ಇದೇ ಹೊತ್ತಿನಲ್ಲಿ ಮೂವರು ಮುಖಂಡರು ಕಾಂಗ್ರಸ್ ಗೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.
Three former JDS MLAs from Mandya join congress, JDS in trouble including Marithibbegowda.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am