ಬ್ರೇಕಿಂಗ್ ನ್ಯೂಸ್
22-03-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 22: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಹೌದು, ಮಂಡ್ಯ ಭಾಗದ ಜೆಡಿಎಸ್ ನ ಮಾಜಿ ಮೂವರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಎಂಎಲ್ ಸಿ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ. ಶ್ರೀನಿವಾಸ್, ಮಾಜಿ ಎಂಎಲ್ ಸಿ ಅಪ್ಪಾಜಿ ಗೌಡ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು ಎಂದರು.
ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಮರಿ ತಿಬ್ಬೇಗೌಡ ಮಾತನಾಡಿ, ಮೈಸೂರು ಚಾಮರಾಜನಗರ, ಹಾಸನ ಮಂಡ್ಯ ಜಿಲ್ಲೆಗಳಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದೇನೆ. ಶಿಕ್ಷಕ ಸಮುದಾಯದ ಹಾಗೂ ಜನರ ಹಿತದೃಷ್ಟಿಯಿಂದ ಜಾತ್ಯತೀತ ನಿಲುವಿನೊಂದಿಗೆ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಬಿಕೆ ಹರಿಪ್ರಸಾದ್, ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ಜೆಡಿಎಸ್ ಮತ್ತು ಹಾಲಿ ಸಂಸದ ಸುಮಲತಾ ಇಬ್ಬರೂ ಈ ಕ್ಷೇತ್ರಕ್ಕೆ ಪಟ್ಟು ಹಿಡಿದಿರುವುದರಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ. ಇದೇ ಹೊತ್ತಿನಲ್ಲಿ ಮೂವರು ಮುಖಂಡರು ಕಾಂಗ್ರಸ್ ಗೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.
Three former JDS MLAs from Mandya join congress, JDS in trouble including Marithibbegowda.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm