ಬ್ರೇಕಿಂಗ್ ನ್ಯೂಸ್
23-03-24 10:45 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ರಾಜ್ಯಕ್ಕೆ ಎನ್ಡಿಆರ್ಎಫ್ ನಿಧಿ, ಬರ ಪರಿಹಾರದ ಹಣವನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಬಾಗಿಲು ಬಡಿದಿದ್ದೇವೆ. ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ ಅಂತ ಐದು ತಿಂಗಳು ಕಾದಿದ್ದು ಈಗ ಕೋರ್ಟ್ ಮೆಟ್ಟಿಲೇರದೆ ಬೇರೆ ದಾರಿ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿತ್ತು. ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸಿ ಕೋರ್ಟ್ ಮೆಟ್ಟಿಲೇರಿದ್ದೇವೆ ಎಂದರು.
ಬರ, ಅತಿವೃಷ್ಟಿಯಂತಹ ಸಂದರ್ಭದಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ, ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದು ಪೈಸೆಯನ್ನೂ ಕೇಂದ್ರ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಅಂತ ಘೋಷಿಸಲಾಗಿದೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರ ಗಮನ ಕೊಟ್ಟಿಲ್ಲ ಎಂದರು.
ನಿಯಮ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸಿ ವರದಿ ನೀಡಿದೆ. ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು NDRF ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.
Tired of waiting for drought relief funds, the Congress-ruled Karnataka government has dragged the Union government to the Supreme Court seeking release of the financial aid that has not come for several months.The state government on Saturday filed a writ petition before the Supreme Court under Article 32 of the Constitution. The government has sought financial aid under the National Disaster Response Fund (NDRF).
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm