ಬ್ರೇಕಿಂಗ್ ನ್ಯೂಸ್
24-03-24 05:31 pm Mangaluru Correspondent ಕರ್ನಾಟಕ
ಬೆಂಗಳೂರು, ಮಾ.24: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ, ಹಿಂದಿ ಇಂಗ್ಲಿಷ್ ಬರಲ್ಲ, ಅವರಿಗೆ ಮತ ಹಾಕಬೇಡಿ ಎಂಬ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಲ್ಲದೆ, "ಆಪರೇಷನ್ ಕಮಲ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಲಾಗಿದೆ" ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧವೂ ಬಿಜೆಪಿಯಿಂದ ದೂರು ನೀಡಲಾಗಿದೆ. ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ವಕ್ತಾರ ಪ್ರಕಾಶ್ ಕೋಣೆಮನೆ, ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ್ ಕುಮಾರ್ ಜತೆಗಿದ್ದರು. ಜಯಪ್ರಕಾಶ್ ಹೆಗ್ಡೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.

ಮಾ.22ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ "ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ" ಎಂದಿದ್ದರು. ಈ ಬಗ್ಗೆ "ಕೋಟಗೆ ಹಿಂದಿ, ಇಂಗ್ಲಿಷ್ ಬರಲ್ಲ, ಗೆಲ್ಲಿಸಬೇಡಿ" ಎಂಬ ಶೀರ್ಷಿಕೆಯಡಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸದರಿ ಹೇಳಿಕೆಯು ಭಾಷಾ ಸಾಮರಸ್ಯವನ್ನು ಹದಗೆಡಿಸುವ ಹಾಗೂ ಕನ್ನಡಿಗರ ಅಸ್ಮಿತೆಗೆ ಧಕ್ಕೆ ತರುವುದಲ್ಲದೆ ಪ್ರಾದೇಶಿಕ ಭಾಷೆಯ ಬಗ್ಗೆ ಅವಮಾನಕರ ಹೇಳಿಕೆಯಾಗಿರುತ್ತದೆ. ಆದ್ದರಿಂದ ಭಾಷೆಯ ಹೆಸರಿನಲ್ಲಿ ಮತ ಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸಬೇಡಿ ಎಂದು ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಹೇಳಿದೆ.
The Opposition BJP in Karnataka has filed a formal complaint with Election Commission of India against Congress candidate from Udupi-Chikkamagaluru constituency K Jayaprakash Hegde for his reported appeal to voters not to support his BJP rival Kota Srinivas Poojary on the grounds that he does not know English and Hindi languages.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am