ಬ್ರೇಕಿಂಗ್ ನ್ಯೂಸ್
24-03-24 05:31 pm Mangaluru Correspondent ಕರ್ನಾಟಕ
ಬೆಂಗಳೂರು, ಮಾ.24: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ, ಹಿಂದಿ ಇಂಗ್ಲಿಷ್ ಬರಲ್ಲ, ಅವರಿಗೆ ಮತ ಹಾಕಬೇಡಿ ಎಂಬ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಲ್ಲದೆ, "ಆಪರೇಷನ್ ಕಮಲ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಲಾಗಿದೆ" ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧವೂ ಬಿಜೆಪಿಯಿಂದ ದೂರು ನೀಡಲಾಗಿದೆ. ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ವಕ್ತಾರ ಪ್ರಕಾಶ್ ಕೋಣೆಮನೆ, ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ್ ಕುಮಾರ್ ಜತೆಗಿದ್ದರು. ಜಯಪ್ರಕಾಶ್ ಹೆಗ್ಡೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.

ಮಾ.22ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ "ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ" ಎಂದಿದ್ದರು. ಈ ಬಗ್ಗೆ "ಕೋಟಗೆ ಹಿಂದಿ, ಇಂಗ್ಲಿಷ್ ಬರಲ್ಲ, ಗೆಲ್ಲಿಸಬೇಡಿ" ಎಂಬ ಶೀರ್ಷಿಕೆಯಡಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸದರಿ ಹೇಳಿಕೆಯು ಭಾಷಾ ಸಾಮರಸ್ಯವನ್ನು ಹದಗೆಡಿಸುವ ಹಾಗೂ ಕನ್ನಡಿಗರ ಅಸ್ಮಿತೆಗೆ ಧಕ್ಕೆ ತರುವುದಲ್ಲದೆ ಪ್ರಾದೇಶಿಕ ಭಾಷೆಯ ಬಗ್ಗೆ ಅವಮಾನಕರ ಹೇಳಿಕೆಯಾಗಿರುತ್ತದೆ. ಆದ್ದರಿಂದ ಭಾಷೆಯ ಹೆಸರಿನಲ್ಲಿ ಮತ ಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸಬೇಡಿ ಎಂದು ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಹೇಳಿದೆ.
The Opposition BJP in Karnataka has filed a formal complaint with Election Commission of India against Congress candidate from Udupi-Chikkamagaluru constituency K Jayaprakash Hegde for his reported appeal to voters not to support his BJP rival Kota Srinivas Poojary on the grounds that he does not know English and Hindi languages.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm