ಬ್ರೇಕಿಂಗ್ ನ್ಯೂಸ್
24-03-24 09:46 pm HK News Desk ಕರ್ನಾಟಕ
ಬೆಳಗಾವಿ, ಮಾ.24: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.
ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯ ಪಡಬೇಕಾಗಿಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿ ಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.
Belagavi Prof GL Manjunath says will teach Kota Srinivas Poojary free English within a month's time. Congress candidate from the Udupi-Chikmagaluru constituency K Jayaprakash Hegde has clarified that, contrary to the allegation made against him in certain media reports recently, he had not made derogatory statements on his BJP rival Kota Srinivas Poojary's knowledge of language.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm