ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm