ಬ್ರೇಕಿಂಗ್ ನ್ಯೂಸ್
27-03-24 02:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಬಿಜೆಪಿ ನಾಯಕಿ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ನೀಡಿದ್ದಾರೆ.
ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ, ಬಿಜೆಪಿಯ ತೇಜಸ್ವಿನಿ ರಮೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
ತೇಜಸ್ವಿನಿ ರಮೇಶ್ ಅವಧಿ ಇದೇ ಜೂನ್ ತಿಂಗಳ ವರೆಗೂ ಇತ್ತು. ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಅಥವಾ ಮೈಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ, ಟಿಕೆಟ್ ಸಿಗದ ಬೇಸರದಲ್ಲಿದ್ದರು. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿತ್ತು. ಡಿಕೆಶಿ ಒಕ್ಕಲಿಗರಲ್ಲಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿ ಹರಡಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಟಿವಿ ಡಿಬೇಟ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ತೇಜಸ್ವಿನಿ ಮೂಲತಃ ಪತ್ರಿಕೋದ್ಯಮ ಹಿನ್ನೆಲೆಯಿಂದ ಬಂದವರು.
Tejaswini Gowda, who was a member of the Legislative Council of BJP (Karnataka BJP), today met Speaker Basavaraj Horatti and submitted her resignation. Horatti informed about this, BJP's Tejaswini Gowda Ramesh Gowda has resigned. He clarified that I did a lot of convincing and said that I am resigning due to my personal reasons.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am