ಬ್ರೇಕಿಂಗ್ ನ್ಯೂಸ್
27-03-24 05:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಯ್ಕೆ ವಿಚಾರದಲ್ಲಿ ಶಾಸಕರ ನಡುವಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯನಿಗೆ ಟಿಕೆಟ್ ನೀಡುವಂತೆ ಪಟ್ಟುಹಿಡಿದಿದ್ದಾರೆ. ರಮೇಶ್ ಕುಮಾರ್ ಬಣ ತಾವು ಬೆಂಬಲಿಸುವ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ, ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಆಗಿದೆ ಎಂಬ ಸುದ್ದಿ ತಿಳಿದ ಕೋಲಾರದ ಐವರು ಶಾಸಕರು ರಾಜಿನಾಮೆ ನೀಡುವುದಾಗಿ ಹೇಳಿ ಹೈಡ್ರಾಮಾ ನಡೆಸಿದ್ದಾರೆ. ಇದಲ್ಲದೆ, ಕೋಲಾರದ ರಾಜಕೀಯ ಬಿಕ್ಕಟ್ಟಿನಿಂದ ಬೇಸತ್ತ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ರಾಜೀನಾಮೆ ನೀಡಲು ಮುಂದಾಗಿರುವುದು ಕಾಂಗ್ರೆಸ್ಗೆ ಶಾಕ್ ನೀಡಿದೆ.
ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದನ್ನು ಖಂಡಿಸಿ ಕೋಲಾರ ಭಾಗದ ನಾಲ್ವರು ಶಾಸಕರು ಮತ್ತು ಸಚಿವ ಎಂಸಿ ಸುಧಾಕರ್ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರಂತೆ. ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹ್ಮದ್ ಹಾಗೂ ಅನಿಲ್ ಕುಮಾರ್ ರಾಜೀನಾಮೆ ಪತ್ರವನ್ನು ಬರೆದು ಅದನ್ನು ಮಾಧ್ಯಮಕ್ಕೆ ತೋರಿಸಿದ್ದು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜಿನಾಮೆ ನೀಡುತ್ತೇವೆಂದು ಹೇಳುತ್ತಿರುವಾಗಲೇ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ವಿಧಾನಸೌಧಕ್ಕೆ ಆಗಮಿಸಿ, ಶಾಸಕರ ಮನವೊಲಿಕೆಗೆ ಮುಂದಾದರು.
ಲೋಕಸಭೆ ಟಿಕೆಟ್ ಬಗ್ಗೆ ಇಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಶಾಸಕರೊಂದಿಗೆ ಚರ್ಚಿಸಲಿದ್ದು ಅಲ್ಲಿ ಚರ್ಚೆ ಮಾಡೋಣ. ಈಗ ರಾಜೀನಾಮೆ ಕೊಡುವುದು ಬೇಡ ಎಂದು ವಿಧಾನ ಪರಿಷತ್ ಸದಸ್ಯರಿಗೆ ಮನವೊಲಿಸಿದರು. ಅದಕ್ಕೆ ಶಾಸಕರು ಒಪ್ಪಿ ರಾಜೀನಾಮೆ ನೀಡುವುದನ್ನು ಕೈಬಿಟ್ಟರು.
ಇದೇ ವೇಳೆ ಸಚಿವ ಎಂ.ಸಿ. ಸುಧಾಕರ್ ಮಾತನಾಡಿ, ಮುನಿಯಪ್ಪ ನನ್ನನ್ನು ಎರಡು ಬಾರಿ ಸೋಲಿಸಿದ್ದು ಆಮೇಲೆ ಪಕ್ಷದಿಂದ ಟಿಕೆಟ್ ಸಿಗದೆ ಪಕ್ಷೇತರನಾಗಿ ಸ್ಪರ್ಧೆ ಮಾಡುವಂತಾಗಿತ್ತು. ಆ ನೋವು ಇದೆ. ಜೊತೆಗೆ ನಮ್ಮ ಕ್ಷೇತ್ರದ ಕಾರ್ಯಕರ್ತರಿಗೂ ಮುನಿಯಪ್ಪ ನೋವು ಕೊಟ್ಟಿದ್ದಾರೆ. ಹೀಗಾಗಿ ಅವರ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದು ಹೇಳಿಕೆ ನೀಡಿದ್ದಾರೆ.
The tussle over the Congress Lok Sabha ticket for the Kolar constituency in Karnataka took a dramatic turn on Wednesday after three party MLAs and two MLCs arrived at the Vidhana Soudha and threatened to tender their resignations over the issue.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am