ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm