ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am