ಬ್ರೇಕಿಂಗ್ ನ್ಯೂಸ್
28-03-24 04:14 pm HK News Desk ಕರ್ನಾಟಕ
ದಾವಣಗೆರೆ, ಮಾ.28: ಬಿಜೆಪಿ ಬಂಡಾಯ ಮುಗಿಯುತ್ತಿದ್ದಂತೆ ದಾವಣಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೈ ಟಿಕೆಟ್ ವಂಚಿತ ವಿನಯ್ ಕುಮಾರ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಹಿಂದ ವರ್ಗದ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಪಕ್ಷದಿಂದ ದಾವಣಗೆರೆ ಟಿಕೆಟ್ ಪಡೆಯಲು ನಿರಂತರ ಪ್ರಯತ್ನ ನಡೆಸಿದ್ದರು. ಶಾಮನೂರು ಕುಟುಂಬಕ್ಕೆ ಟಿಕೆಟ್ ಘೋಷಣೆಯಾದ ನಂತರವೂ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಟಿಕೆಟ್ ಸಿಗಲ್ಲ ಎನ್ನೋದು ಖಾತ್ರಿಯಾಗುತ್ತಿದ್ದಂತೆ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಹಿಂದೆ ಚೆನ್ನಯ್ಯ ಒಡೆಯರ್ ಗೆ ಆದಂತೆ ಮತ್ತೊಮ್ಮೆ ಘೋರ ಅನ್ಯಾಯ ಅಹಿಂದ ವರ್ಗಕ್ಕೆ ಆಗಿದೆ. ಬಹುತೇಕ ಡಿಸೈಡ್ ಮಾಡಿದ್ದೇನೆ, 100% ಬಂಡಾಯ ಸ್ಪರ್ಧಿಸಿ ಗೆಲ್ಲುತ್ತೇನೆ. ಒಂದು ಹೆಜ್ಜೆ ಮುಂದೇ ಇಟ್ಟರೆ ಹಿಂದೇ ತೆಗೆಯಲ್ಲ. ಶೀಘ್ರದಲ್ಲೆ ನಾಮಿನೇಷನ್ ದಿನಾಂಕ ತಿಳಿಸುತ್ತೇನೆ ಎಂದು ವಿನಯ ಕುಮಾರ್ ತಿಳಿಸಿದ್ದಾರೆ.
ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಅವರ ಪತ್ನಿಗೆ ಟಿಕೆಟ್ ಕೊಡಿಸಲು ನನ್ನನ್ನು ದೂರ ಇಟ್ಟಿದ್ದಾರೆ ಎಂದು ವಿನಯ ಕುಮಾರ್ ಆರೋಪಿಸಿದ್ದಾರೆ. ವಿನಯ್ ಕುಮಾರ್ ದಾವಣಗೆರೆಯವನು ಅಲ್ಲ ಎಂಬ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿನಯ್, ನಾನು ದಾವಣಗೆರೆಯಲ್ಲೇ ಹುಟ್ಟಿ ಬೆಳೆದಿರೋದು. ಸಚಿವರ ಒಡೆತನದ ಬಾಪೂಜಿ ಅಸ್ಪತ್ರೆಯಲ್ಲೆ ಹುಟ್ಟಿರೋದು. ದಾವಣಗೆರೆಯವನು ಅಲ್ಲ ಎಂದು ಟಿಕೆಟ್ ತಪ್ಪಿಸಿದ್ದೇವೆ ಎಂದು ಹೇಳಿದ್ದಾರೆ. ನಾನು ದಾವಣಗೆರೆಯವನೇ, ಮದುವೆ ಆಗಿರೋದು ದಾವಣಗೆರೆಯಲ್ಲೇ. ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನಗೆ ತಪ್ಪಿಸಿ ಅವರು ಟಿಕೆಟ್ ತಗೊಂಡಿದ್ದಾರೆ, ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
As soon as the BJP's rebellion ended, differences erupted in the Davanagere Congress. Vinay Kumar, who was denied a ticket, has announced that he will contest the elections as an independent.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm