ಬ್ರೇಕಿಂಗ್ ನ್ಯೂಸ್
28-03-24 08:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಪ್ರಮುಖ ಸಂಚುಕೋರ ಎನ್ನಲಾದ ಮುಝಾಮಿಲ್ ಶರೀಫ್ ಎಂಬಾತನನ್ನು ಬಂಧಿಸಿದ್ದಾರೆ.
ಎರಡು ದಿನಗಳಿಂದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕರ್ನಾಟಕದ 12 ಕಡೆ, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ ಒಂದು ಕಡೆ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಮುಝಾಮಿಲ್ ಶರೀಫ್ ಎಂಬಾತನನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಿ ಅರೆಸ್ಟ್ ಮಾಡಿದ್ದಾರೆ.
ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿದ್ದ ಎನ್ಐಎ ಅಧಿಕಾರಿಗಳು ಸಿಸಿಟಿವಿ ಆಧರಿಸಿ ಬಾಂಬ್ ಇರಿಸಿ ಹೋಗಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಮೂಲದ ಮುಸಾವಿರ್ ಶಜೀಬ್ ಹುಸೇನ್ ಎಂದು ಗುರುತಿಸಿದ್ದರು. ಅಲ್ಲದೆ, ಕೃತ್ಯಕ್ಕೆ ಆತನ ಸಹಚರ ಅಬ್ದುಲ್ ಮತೀನ್ ತಾಹಾ ಸಹಕಾರ ನೀಡಿದ್ದ ಎಂದೂ ಪತ್ತೆ ಮಾಡಿದ್ದರು. ಘಟನೆಗೂ ಮುನ್ನ ಎರಡು ತಿಂಗಳ ಕಾಲ ಇವರಿಬ್ಬರು ಚೆನ್ನೈನಲ್ಲಿ ಉಳಿದುಕೊಂಡಿದ್ದರು ಎನ್ನುವುದನ್ನೂ ಪತ್ತೆ ಹಚ್ಚಿದ್ದರು.
ಕಾರ್ಯಾಚರಣೆ ಬಗ್ಗೆ ಎನ್ಐಎ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಮುಝಾಮಿಲ್ ಶರೀಫ್ ಎಂಬಾತ ಇಬ್ಬರು ಆರೋಪಿಗಳಿಗೆ ರಾಮೇಶ್ವರ ಕೆಫೆಯಲ್ಲಿ ಇರಿಸಲಾಗಿದ್ದ ಐಇಡಿ ಬಾಂಬ್ ಸಾಮಗ್ರಿಯನ್ನು ತಲುಪಿಸಲು ಸಹಕರಿಸಿದ್ದ ಎಂದು ಹೇಳಿದೆ. ಮಾರ್ಚ್ 1ರಂದು ಕೆಫೆಯಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡು ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದರು. ಬ್ಲಾಸ್ಟ್ ಆದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಸ್ಫೋಟಕ್ಕೂ ಮುನ್ನ ಬಂದು ಹೋಗಿದ್ದ ವ್ಯಕ್ತಿಯೊಬ್ಬ ಚೀಲದಲ್ಲಿ ಬಾಂಬ್ ಅನ್ನು ಇಟ್ಟು ಹೋಗಿರುವುದೂ ಸೆರೆಯಾಗಿತ್ತು.
ಮುಸಾವಿರ್ ಮತ್ತು ಅಬ್ದುಲ್ ಮತೀನ್ ಕೃತ್ಯ ಎಸಗಿದವರು ಎಂದು ಎನ್ಐಎ ಅಧಿಕಾರಿಗಳು ದೃಢಪಡಿಸಿದ್ದು, ಆ ಹಿನ್ನೆಲೆಯಲ್ಲಿ ಶಿವಮೊಗ್ಗದ ತೀರ್ಥಹಳ್ಳಿಯ ಅವರ ಮನೆಗಳು, ಶಾಪ್ ಗಳು, ಅವರ ಸಹವರ್ತಿಗಳ ಭಟ್ಕಳದ ಮನೆಗಳಿಗೆ ದಾಳಿ ನಡೆಸಲಾಗಿತ್ತು. ಈ ವೇಳೆ, ಹಲವಾರು ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿತ್ತು. ಪ್ರಮುಖ ಆರೋಪಿಗಳಾದ ಮುಸಾವಿರ್ ಮತ್ತು ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದೀಗ ಅರೆಸ್ಟ್ ಆಗಿರುವ ಮುಝಾಮಿಲ್ ಶರೀಫ್ ಎಲ್ಲಿಯವನು ಎಂಬ ಬಗ್ಗೆ ಎನ್ಐಎ ಅಧಿಕಾರಿಗಳು ಮಾಹಿತಿ ಬಿಟ್ಟುಕೊಟ್ಟಿಲ್ಲ.
The key conspirator in the Rameshwaram cafe blast case in Bangalore Muzammil Shareef is arrested by the National Investigation Agency today after massive raids across multiple locations in three states. Several customers and hotel staff members were injured in the blast on March 1, which caused extensive damage to the popular cafe.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm