ಬ್ರೇಕಿಂಗ್ ನ್ಯೂಸ್
29-03-24 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿದ್ದ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಮಧ್ಯ ಪ್ರವೇಶ ಮಾಡುತ್ತಿದ್ದಂತೆ ತಣ್ಣಗಾಗಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಬಲಗೈ ಸಮುದಾಯಕ್ಕೆ ಆದ್ಯತೆ ನೀಡಬೇಕೆಂಬ ಬೇಡಿಕೆಯಿಂದ ರಮೇಶ್ ಕುಮಾರ್ ಬಣ ಹಿಂದೆ ಸರಿದಿದೆ ಎನ್ನಲಾಗುತ್ತಿದೆ. ಆದರೆ ಸಚಿವ ಕೆಎಚ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಹೊರತಾಗಿ ಬೇರೆ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಬಹುದು ಎಂದು ಷರತ್ತು ಹಾಕಿದ್ದಾರೆ. ಇದರೊಂದಿಗೆ ರಾಜ್ಯಸಭೆ ಪುನರಾಯ್ಕೆ ಅವಕಾಶ ವಂಚಿತರಾದ ಎಲ್.ಹನುಮಂತಯ್ಯ ಅವರಿಗೆ ಅದೃಷ್ಟ ಒಲಿಯುವ ನಿರೀಕ್ಷೆಯಿದೆ.
ಸಚಿವ ಮುನಿಯಪ್ಪ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ ತನ್ನ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಫೈನಲ್ ಮಾಡಿಸಿದ್ದಾರೆ ಎಂದು ಆಕ್ರೋಶಗೊಂಡಿದ್ದ ಸಚಿವ ಡಾ.ಎಂ.ಸಿ.ಸುಧಾಕರ್, ಮೇಲ್ಮನೆ ಸದಸ್ಯರಾದ ನಜೀರ್ ಅಹ್ಮದ್, ಅನಿಲ್ ಕುಮಾರ್, ಶಾಸಕರಾದ ಕೆವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಬುದವಾರ ರಾಜಿನಾಮೆ ನೀಡುವುದಾಗಿ ಹೇಳಿ ಹೈಡ್ರಾಮಾ ನಡೆಸಿದ್ದರು. ಇದರ ಬೆನ್ನಲ್ಲೇ ಗುರುವಾರ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಅತೃಪ್ತ ಶಾಸಕರು ಸಭೆ ನಡೆಸಿದರು. ಸಂಧಾನ ಮಾತುಕತೆ ಬಹುತೇಕ ಫಲ ಕೊಟ್ಟಿದೆ ಎನ್ನಲಾಗುತ್ತಿದ್ದು, ಹೈಕಮಾಂಡ್ ನಿರ್ಧರಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದಾರೆ.
ಮುನಿಯಪ್ಪ ಕುಟುಂಬದ ಹೊರತಾಗಿ ಯಾರಿಗೆ ಟಿಕೆಟ್ ಕೊಟ್ಟರು ನಮ್ಮ ಸಮ್ಮತಿಯಿದೆ ಎಂಬ ರಮೇಶ್ ಕುಮಾರ್ ಬಣದ ಅಭಿಪ್ರಾಯವನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿವ ಸಿಎಂ ಮತ್ತು ಡಿಕೆಶಿ ಸಭೆಯಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಮುನಿಯಪ್ಪ ವಿರೋಧಿ ಬಣ ತಮ್ಮ ಪಟ್ಟು ಯಶಸ್ಸು ಕಂಡ ಖುಷಿಯಲ್ಲಿದ್ದಾರೆ.
L hanumanthaiah mostly to get ticket from kolar after cm siddaramaiah intervenes. A day after five Congress legislators threatened to resign over fielding Food and Civil Supplies Minister K H Muniyappa’s son-in-law Chikka Peddanna from the Kolar Lok Sabha constituency, the disgruntled group agreed to set aside their differences and back the candidate fielded by the party.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm