ಬ್ರೇಕಿಂಗ್ ನ್ಯೂಸ್
01-04-24 06:39 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ಮನೆಯ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಇಬ್ಬರು ದಂಪತಿಗಳ ನಡುವೆ ಗಲಾಟೆ ಆರಂಭವಾಗಿ ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ನಡೆದಿದೆ.
ನೆರೆಮನೆಯಲ್ಲಿರುವ ಪ್ರಣಬ್ ಜ್ಯೋತಿ ಸಿಂಗ್-ನೇಹಾ ದಂಪತಿಯ ಕಾಟಕ್ಕೆ ಬೇಸತ್ತ ಮಂಜುನಾಥ್ ಹಾಗೂ ಸರಿತಾ ದಂಪತಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಡಿಚಿಕ್ಕನಹಳ್ಳಿಯ ಚೈತನ್ಯ ಪ್ಯಾರಡೈಸ್ ಅಪಾರ್ಟ್ಮೆಂಟಿನ 3ನೇ ಮಹಡಿಯಲ್ಲಿ ಮಂಜುನಾಥ್ ಮತ್ತು ಸರಿತಾ ದಂಪತಿ ವಾಸಿಸುತ್ತಿದ್ದಾರೆ. ಇವರ ಪಕ್ಕದ ಮನೆಯಲ್ಲಿ ನೇಹಾ ಹಾಗೂ ಪ್ರಣಬ್ ಜ್ಯೋತಿ ಸಿಂಗ್ ವಾಸವಿದ್ದಾರೆ. ಎರಡು ವರ್ಷಗಳಿಂದ ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಎರಡೂ ಮನೆಯವರ ನಡುವೆ ಗಲಾಟೆಯಾಗಿತ್ತು. ಮಂಜುನಾಥ್ ದಂಪತಿಯ ಮನೆ ಬಾಗಿಲು ತೆರೆದರೆ ಕಾಣುವ ಹಾಗೆ ನೇಹಾ ತಮ್ಮ ಚಪ್ಪಲಿ ಸ್ಟ್ಯಾಂಡ್ ಇರಿಸಿರುತ್ತಿದ್ದರಂತೆ. ಇದರಿಂದ ಬೇಸತ್ತ ಮಂಜುನಾಥ್, ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇಡದಂತೆ ನೇಹಾಗೆ ಹೇಳಿದ್ದರು. ಈ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ.
ಅಂದಿನಿಂದಲೂ ಗಲಾಟೆ ಮುಂದುವರೆದು ಮಂಜುನಾಥ್ ಮನೆಯವರಿಗೆ ನೇಹಾ ದಿನನಿತ್ಯ ಕಿರುಕುಳ ನೀಡುತ್ತಿದ್ದರು. ಮನೆಯಿಂದ ಹೋಗುವಾಗ ಬರುವಾಗ ಉದ್ದೇಶಪೂರ್ವಕವಾಗಿ ಮಂಜುನಾಥ್ ಮನೆಯ ಚಪ್ಪಲಿ ಸ್ಟ್ಯಾಂಡ್ ಬೀಳಿಸುವುದು, ಮನೆ ಮುಂದೆ ಬಿಡಿಸಿದ್ದ ರಂಗೋಲಿಯನ್ನು ಕಾಲಿಂದ ಅಳಿಸುವ ಕೆಲಸ ಮಾಡುತ್ತಿದ್ದರು. ನಿತ್ಯ ಕಿರುಕುಳ ಸಹಿಸಲಾರದ ಮಂಜುನಾಥ್ ಹಾಗೂ ಸರಿತಾ ದಂಪತಿ, ನೇಹಾಳ ಕೃತ್ಯಗಳನ್ನೊಳಗೊಂಡ ಸಿಸಿಟಿವಿ ದೃಶ್ಯಗಳ ಸಮೇತ ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿದ್ದು, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore police case filed over shoe stand fight. Neighbours who were fighting for shoe stand being kept at the door side have ended up in the police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm