ಬ್ರೇಕಿಂಗ್ ನ್ಯೂಸ್
03-04-24 09:44 pm HK News Desk ಕರ್ನಾಟಕ
ಮೈಸೂರು, ಎ.3: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್. ವಿಶ್ವನಾಥ್, ‘ರಾಜ ಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.
ಮೈಸೂರಿನ ಅರಸರು ಜಾತಿ ಮುಂದಿಟ್ಟು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು. ನಾನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
Mysuru Vishwanath to support Yaduveer Wadiyar after BJP state president Vijayendra met him at this residence along with Yaduveer Wadiyar
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm