ಬ್ರೇಕಿಂಗ್ ನ್ಯೂಸ್
04-04-24 11:56 am HK News Desk ಕರ್ನಾಟಕ
ಚಿಕ್ಕಮಗಳೂರು, ಏ 04: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚಿಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೋ ಇಲ್ಲವೋ… ಇದ್ದರೂ ಏನು ಮಾಡ್ತಿದ್ದಾರೆ ಎಂಬ ಪ್ರಶ್ನೆ ಸ್ಥಳಿಯರು ಹಾಗೂ ಸಾರ್ವಜನಿಕರನ್ನ ಕಾಡುತ್ತಿದೆ.
ಏಕೆಂದರೆ, ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ. ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಈಗ ಮತ್ತೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್ ಆಗಿದೆ. ರಸ್ತೆಯ ತಿರುವಿನಲ್ಲಿ ಲಾರಿ ಟರ್ನ್ ಆಗದೆ ನಿಂತಲ್ಲಿ ನಿಂತಿದೆ. ಬೆಳಗ್ಗೆಯಿಂದಲೂ ಕೂಡ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ನಿಂತಲ್ಲೇ ನಿಂತು ಮುಂದೆ ಹೋಗಲಾಗದೆ ಹಿಂದೆಯೂ ಬರಲಾಗದೆ ಪರದಾಡುವಂತೆ ಆಗಿದೆ.
ಬಳ್ಳಾರಿಯಿಂದ ಸರಕನ್ನ ತುಂಬಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಲಾಕ್ ಆಗಿರೋದ್ರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಬಸ್ಸು ಹಾಗೂ ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಅಪಾಯಕಾರಿ ತಿರುವಿನ ಚಾರ್ಮಾಡಿ ಘಾಟಿಯಲ್ಲಿ ಅಷ್ಟು ದೊಡ್ಡ ವಾಹನಗಳು ಹೇಗೆ ಹೋಗಿದ್ದಾವೆ ಅನ್ನೋದು ಯಕ್ಷಪ್ರಶ್ನೆಯಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ಹಾಗೂ ಚಿಕ್ಕಮಗಳೂರು ಗಡಿಯಾಗಿರುವ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಇತರೆ ಅಧಿಕಾರಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರುಗಳ ಕಣ್ಣುಗಳನ್ನು ತಪ್ಪಿಸಿ 12 ಚಕ್ರದ ಲಾರಿ ಹೇಗೆ ಹೋಯಿತು ಅನ್ನೋದು ಸ್ಥಳೀಯರ ಅನುಮಾನಕ್ಕೂ ಕಾರಣವಾಗಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಪೊಲೀಸರೇ ಲಾರಿಗಳನ್ನು ಬಿಡುತ್ತಿದ್ದಾರೆ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆರೋಪಿಸಿದ್ದಾರೆ. ಚಾರ್ಮಾಡಿ ಘಾಟಿಯನ್ನ ಬದುಕಿನ ದಾರಿ ಎಂದು ಕರೆಯುತ್ತಾರೆ. ನಿತ್ಯ ಈ ಮಾರ್ಗದಲ್ಲಿ ರೋಗಿಗಳನ್ನ ಹೊತ್ತ ಹಲವು ಆಂಬುಲೆನ್ಸ್ ಗಳು ಕೂಡ ಉಡುಪಿ ಹಾಗೂ ಮಂಗಳೂರಿಗೆ ಹೋಗುತ್ತವೆ. ಹೀಗೆ ಬಾರಿ ವಾಹನದಿಂದ ಟ್ರಾಫಿಕ್ ಜಾಮ್ ಉಂಟಾದರೆ ಆಂಬುಲೆನ್ಸ್ ಕೂಡ ಹೇಗೆ ಹೋಗೋದು ಅನ್ನೋದು ಸ್ಥಳೀಯರ ಪ್ರಶ್ನೆಯಾಗಿದೆ. ಹಾಗಾಗಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿರುವ ಸ್ಥಳೀಯರು ಹಾಗೂ ವಾಹನ ಸವಾರರು ಕೂಡಲೇ ಚಾರ್ಮಾಡಿ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟಕ್ಕೆ ಕಟ್ಟುನಿಟ್ಟಿನ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.
12 wheeler truck stuck at Charmadi Ghat, traffic block, passengers slams check post police of Kottigehara for showing negligence over allowing huge truck to go over the Ghat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm