ಬ್ರೇಕಿಂಗ್ ನ್ಯೂಸ್
04-04-24 11:56 am HK News Desk ಕರ್ನಾಟಕ
ಚಿಕ್ಕಮಗಳೂರು, ಏ 04: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚಿಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೋ ಇಲ್ಲವೋ… ಇದ್ದರೂ ಏನು ಮಾಡ್ತಿದ್ದಾರೆ ಎಂಬ ಪ್ರಶ್ನೆ ಸ್ಥಳಿಯರು ಹಾಗೂ ಸಾರ್ವಜನಿಕರನ್ನ ಕಾಡುತ್ತಿದೆ.
ಏಕೆಂದರೆ, ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ. ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಈಗ ಮತ್ತೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್ ಆಗಿದೆ. ರಸ್ತೆಯ ತಿರುವಿನಲ್ಲಿ ಲಾರಿ ಟರ್ನ್ ಆಗದೆ ನಿಂತಲ್ಲಿ ನಿಂತಿದೆ. ಬೆಳಗ್ಗೆಯಿಂದಲೂ ಕೂಡ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ನಿಂತಲ್ಲೇ ನಿಂತು ಮುಂದೆ ಹೋಗಲಾಗದೆ ಹಿಂದೆಯೂ ಬರಲಾಗದೆ ಪರದಾಡುವಂತೆ ಆಗಿದೆ.
ಬಳ್ಳಾರಿಯಿಂದ ಸರಕನ್ನ ತುಂಬಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಲಾಕ್ ಆಗಿರೋದ್ರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಬಸ್ಸು ಹಾಗೂ ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಅಪಾಯಕಾರಿ ತಿರುವಿನ ಚಾರ್ಮಾಡಿ ಘಾಟಿಯಲ್ಲಿ ಅಷ್ಟು ದೊಡ್ಡ ವಾಹನಗಳು ಹೇಗೆ ಹೋಗಿದ್ದಾವೆ ಅನ್ನೋದು ಯಕ್ಷಪ್ರಶ್ನೆಯಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ಹಾಗೂ ಚಿಕ್ಕಮಗಳೂರು ಗಡಿಯಾಗಿರುವ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಇತರೆ ಅಧಿಕಾರಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರುಗಳ ಕಣ್ಣುಗಳನ್ನು ತಪ್ಪಿಸಿ 12 ಚಕ್ರದ ಲಾರಿ ಹೇಗೆ ಹೋಯಿತು ಅನ್ನೋದು ಸ್ಥಳೀಯರ ಅನುಮಾನಕ್ಕೂ ಕಾರಣವಾಗಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಪೊಲೀಸರೇ ಲಾರಿಗಳನ್ನು ಬಿಡುತ್ತಿದ್ದಾರೆ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆರೋಪಿಸಿದ್ದಾರೆ. ಚಾರ್ಮಾಡಿ ಘಾಟಿಯನ್ನ ಬದುಕಿನ ದಾರಿ ಎಂದು ಕರೆಯುತ್ತಾರೆ. ನಿತ್ಯ ಈ ಮಾರ್ಗದಲ್ಲಿ ರೋಗಿಗಳನ್ನ ಹೊತ್ತ ಹಲವು ಆಂಬುಲೆನ್ಸ್ ಗಳು ಕೂಡ ಉಡುಪಿ ಹಾಗೂ ಮಂಗಳೂರಿಗೆ ಹೋಗುತ್ತವೆ. ಹೀಗೆ ಬಾರಿ ವಾಹನದಿಂದ ಟ್ರಾಫಿಕ್ ಜಾಮ್ ಉಂಟಾದರೆ ಆಂಬುಲೆನ್ಸ್ ಕೂಡ ಹೇಗೆ ಹೋಗೋದು ಅನ್ನೋದು ಸ್ಥಳೀಯರ ಪ್ರಶ್ನೆಯಾಗಿದೆ. ಹಾಗಾಗಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿರುವ ಸ್ಥಳೀಯರು ಹಾಗೂ ವಾಹನ ಸವಾರರು ಕೂಡಲೇ ಚಾರ್ಮಾಡಿ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟಕ್ಕೆ ಕಟ್ಟುನಿಟ್ಟಿನ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.
12 wheeler truck stuck at Charmadi Ghat, traffic block, passengers slams check post police of Kottigehara for showing negligence over allowing huge truck to go over the Ghat.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm