ಬ್ರೇಕಿಂಗ್ ನ್ಯೂಸ್
05-04-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 05: ನಟಿ ಕಮ್ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಕೂಡ ಉಪಸ್ಥಿತರಿದ್ದರು.




ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪತ್ರ ಅಭಿಷೇಕ್ ಅಂಬರೀಷ್ ಮತ್ತುನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು. ಬುಧವಾರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ್ದ ಅವರು, ಟಿಕೆಟ್ ಸಿಗದಿದ್ದರೆ ಹಲವು ರಾಜಕಾರಣಿಗಳು ಪಕ್ಷ ಬದಲಾಯಿಸುತ್ತಾರೆ. ಆದರೆ, ನಾನು ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದರು.
ಬಿಜೆಪಿ ಸೇರಿದ ನಂತರ ಮಾತನಾಡಿದ ಸುಮಲತಾ, ಬಿಜೆಪಿ ಸೇರ್ಪಡೆ ನನ್ನ ಉತ್ತಮ ಆಯ್ಕೆ ಎನಿಸಿತ್ತು, ಬೊಮ್ಮಾಯಿ ನನಗೆ 50 ಕೋಟಿ ರು. ಅನುದಾನ ನೀಡಿದ್ದರು, ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನನ್ನ ಪರ ಪ್ರತಾರ ಮಾಡಿದ್ದನ್ನು ಮರೆಯಲಾಗದು, ಮಂಡ್ಯ ಜಿಲ್ಲೆಗೆ ಅಭಿವೃದ್ಧಿಗೆ ಕೊಟ್ಟ ಕೊಡುಗೆ ಬಿಜೆಪಿಗೆ ಸೇರಬೇಕು ಎಂದರು. ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದಿದ್ದರು
ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಸುಮಲತಾ 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದರು, ಮಂಡ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.
Actor-turned-politician and independent MP from Mandya in Karnataka Sumalatha Ambareesh on Friday joined the BJP. Veteran BJP leader B S Yediyurappa, state President B Y Vijayendra, Leader of Opposition in the state Assembly R Ashoka, national General Secretary in-charge of elections in Karnataka Radha Mohan Das Agarwal and former Chief Minister D V Sadananda Gowda were among those
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm