ಬ್ರೇಕಿಂಗ್ ನ್ಯೂಸ್
05-04-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 05: ನಟಿ ಕಮ್ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಕೂಡ ಉಪಸ್ಥಿತರಿದ್ದರು.




ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪತ್ರ ಅಭಿಷೇಕ್ ಅಂಬರೀಷ್ ಮತ್ತುನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು. ಬುಧವಾರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ್ದ ಅವರು, ಟಿಕೆಟ್ ಸಿಗದಿದ್ದರೆ ಹಲವು ರಾಜಕಾರಣಿಗಳು ಪಕ್ಷ ಬದಲಾಯಿಸುತ್ತಾರೆ. ಆದರೆ, ನಾನು ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದರು.
ಬಿಜೆಪಿ ಸೇರಿದ ನಂತರ ಮಾತನಾಡಿದ ಸುಮಲತಾ, ಬಿಜೆಪಿ ಸೇರ್ಪಡೆ ನನ್ನ ಉತ್ತಮ ಆಯ್ಕೆ ಎನಿಸಿತ್ತು, ಬೊಮ್ಮಾಯಿ ನನಗೆ 50 ಕೋಟಿ ರು. ಅನುದಾನ ನೀಡಿದ್ದರು, ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನನ್ನ ಪರ ಪ್ರತಾರ ಮಾಡಿದ್ದನ್ನು ಮರೆಯಲಾಗದು, ಮಂಡ್ಯ ಜಿಲ್ಲೆಗೆ ಅಭಿವೃದ್ಧಿಗೆ ಕೊಟ್ಟ ಕೊಡುಗೆ ಬಿಜೆಪಿಗೆ ಸೇರಬೇಕು ಎಂದರು. ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದಿದ್ದರು
ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಸುಮಲತಾ 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದರು, ಮಂಡ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.
Actor-turned-politician and independent MP from Mandya in Karnataka Sumalatha Ambareesh on Friday joined the BJP. Veteran BJP leader B S Yediyurappa, state President B Y Vijayendra, Leader of Opposition in the state Assembly R Ashoka, national General Secretary in-charge of elections in Karnataka Radha Mohan Das Agarwal and former Chief Minister D V Sadananda Gowda were among those
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm