ಬ್ರೇಕಿಂಗ್ ನ್ಯೂಸ್
05-04-24 05:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿ ಮೂಲದ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.
ಸಾಯಿಪ್ರಸಾದ್ ಎನ್ನುವ ಹೆಸರಿನ ತೀರ್ಥಹಳ್ಳಿ ಬಿಜೆಪಿ ಘಟಕದ ಕಾರ್ಯದರ್ಶಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ. ಮೊಬೈಲ್ ಅಂಗಡಿಯೊಂದಕ್ಕೆ ದಾಳಿ ನಡೆಸಿದ್ದ ಅಧಿಕಾರಿಗಳು ಅದರ ಮಾಲೀಕನಿಗೆ ಬಿಜೆಪಿ ಮುಖಂಡನ ಸಂಪರ್ಕ ಇರುವುದು ತಿಳಿದುಬಂದಿತ್ತು. ಬಳಿಕ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಬೆಂಗಳೂರಿಗೆ ಒಯ್ದಿದ್ದಾರೆ.
ಮಾ.1ರಂದು ನಡೆದಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಈಗಾಗಲೇ ಪ್ರಕರಣದಲ್ಲಿ ತೀರ್ಥಹಳ್ಳಿ ಮೂಲದ ಮುಸಾವಿರ್ ಮತ್ತು ಅಬ್ದುಲ್ ಮತೀನ್ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದು, ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಇದಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಮುಜಾಮಿಲ್ ಎಂಬಾತನನ್ನು ಬಂಧಿಸಿದ್ದು, ಆತನೇ ಬಾಂಬ್ ಸ್ಫೋಟದ ಕಚ್ಚಾ ಸಾಮಗ್ರಿಯನ್ನು ಪೂರೈಸಿದ್ದ ಎಂದು ಆರೋಪಿಸಲಾಗಿದೆ.
ಬಿಜೆಪಿ ಕೈವಾಡದ ಬಗ್ಗೆ ಪ್ರಶ್ನಿಸಿದ ಸಚಿವ
ಇದೀಗ ಪ್ರಕರಣದಲ್ಲಿ ಬಿಜೆಪಿ ತೀರ್ಥಹಳ್ಳಿ ಘಟಕದ ಕಾರ್ಯದರ್ಶಿಯನ್ನು ಬಂಧಿಸಿರುವುದು ಭಾರೀ ಕುತೂಹಲಕ್ಕೀಡು ಮಾಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪ್ರಮುಖರು, ಬಿಜೆಪಿ ನಾಯಕರನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಸ್ಫೋಟಕ್ಕೆ ನಮ್ಮ ಸರಕಾರವೇ ಕಾರಣವೆಂದು ಮಾತನಾಡುತ್ತಿದ್ದ ಬಿಜೆಪಿ ನಾಯಕರು, ಈಗ ಏನು ಹೇಳುತ್ತಾರೆ. ಎನ್ಐಎ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದರಿಂದ ಬಿಜೆಪಿಗೆ ಕೆಫೆ ಸ್ಫೋಟದಲ್ಲಿ ಕೈವಾಡ ಇದೆಯೆಂದು ಅರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ.
BJP Worker Saiprasad from Thirthahalli taken to custody by NIA In Rameshwaram Cafe Blast case. According to the minsters post on X, the BJP worker, identified as Saiprasad, was apprehended from Thirthahalli in Shimoga district, Karnataka.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm