ಬ್ರೇಕಿಂಗ್ ನ್ಯೂಸ್
06-04-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಎ.6: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಬಿಜೆಪಿಯಲ್ಲಿ ಟಿಕೆಟ್ ತಪ್ಪಿದ ಸಂಸದರು ಮತ್ತು ಅತೃಪ್ತ ನಾಯಕರ ಬಗ್ಗೆ ದೆಹಲಿ ಹೈಕಮಾಂಡ್ ನಿಗಾ ಇಟ್ಟಿದ್ದು ತೊಂದರೆ ಎದುರಾಗಬಲ್ಲ, ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಎಚ್ಚರಿಕೆ ವಹಿಸಿದೆ.
ಬಿಜೆಪಿ ಈ ಬಾರಿ 25 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಮೂರು ಸ್ಥಾನಗಳನ್ನು ಮೈತ್ರಿಕೂಟ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಮಂದಿಯನ್ನು ಬದಲಿಸಲಾಗಿದೆ. ಟಿಕೆಟ್ ಸಿಗದ ನಾಯಕರು ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದು ಪಕ್ಷಕ್ಕೆ ಯಾವ ರೀತಿ ಡ್ಯಾಮೇಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪ್ರತ್ಯೇಕ ತಂಡದ ಮೂಲಕ ದೆಹಲಿ ನಾಯಕರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅತೃಪ್ತರಲ್ಲಿ ಕೆಲವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿಲ್ಲ, ಹೀಗಾಗಿ ಪಕ್ಷದ ಅಭ್ಯರ್ಥಿಗಳು ಮುಜುಗರಕ್ಕೀಡಾಗುತ್ತಿದ್ದಾರೆ ಎನ್ನುವ ಮಾಹಿತಿ ಕೇಂದ್ರಕ್ಕೆ ಹೋಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಿನ್ನಮತೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಪಕ್ಷದ ಕೆಲವು ನಾಯಕರೊಂದಿಗೆ ಅಮಿತ್ ಶಾ ಸಂಧಾನವನ್ನೂ ನಡೆಸಿದ್ದರು. ಭಿನ್ನಮತ ಇರುವ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ಅವರಿಗೆ ಹೆಚ್ಚಿನ ಮಾಹಿತಿಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆ, ನಾಯಕರ ಹೇಳಿಕೆಗಳನ್ನು ಗಮನಿಸಲು ಅಮಿತ್ ಶಾ ಪ್ರತ್ಯೇಕ ತಂಡ ಇಟ್ಟುಕೊಂಡಿದ್ದಾರೆ. ಈ ತಂಡವು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ದೆಹಲಿಗೆ ಮಾಹಿತಿ ರವಾನಿಸುತ್ತದೆ ಎನ್ನಲಾಗಿದೆ. ಮೈಸೂರು, ಚಿಕ್ಕಬಳ್ಳಾಪುರ, ಹಾಸನ, ಕೊಪ್ಪಳ, ಬೆಳಗಾವಿ, ಬೆಳಗಾವಿ, ಬೆಂಗಳೂರು ಉತ್ತರ ಮತ್ತು ಇತರ ಕೆಲವು ಕ್ಷೇತ್ರಗಳ ಮೇಲೆ ಕಣ್ಗಾವಲು ಇಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ನಾಯಕರ ಒಳ ಜಗಳವೇ ವ್ಯತಿರಿಕ್ತ ಫಲಿತಾಂಶಕ್ಕೆ ಕಾರಣವಾಗಿತ್ತು. ಗೆಲ್ಲುವ ಅವಕಾಶವಿದ್ದ 20 ಸ್ಥಾನಗಳನ್ನು ಕಳೆದುಕೊಂಡಿದ್ದರು. ಪಕ್ಷದ ನಾಯಕರ ನಡುವಿನ ಕಿತ್ತಾಟದಿಂದಾಗಿ ನಕಾರಾತ್ಮಕ ಫಲಿತಾಂಶ ಬಂದಿತ್ತು. ಲೋಕಸಭೆ ಚುನಾವಣೆಯಲ್ಲಿ ಅದು ಮರುಕಳಿಸದಂತೆ ದೆಹಲಿ ನಾಯಕರೇ ನಿಗಾ ಇಟ್ಟಿದ್ದಾರೆ.
With the Lok Sabha elections in Karnataka just days away, BJP's Delhi team is keeping a keen eye on some contested constituencies. BJP has 25 MPs in the state, one independent, one JDS and one Congress MP. The BJP is contesting 25 seats this time, leaving three seats to its ally JD(S). A senior leader said that more than half of the sitting MPs have been replaced and the leaders who did not get tickets and their supporters are upset. Some of them said that they are not campaigning for our party candidates, thus the party candidates are getting embarrassed.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm