ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.


ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.

ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm