ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.


ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.

ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm