ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm