ಬ್ರೇಕಿಂಗ್ ನ್ಯೂಸ್
10-04-24 04:54 pm HK NEWS ಕರ್ನಾಟಕ
ತುಮಕೂರು, ಏ 10: ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜ್ಞಾನವಿ ವಾಣಿಜ್ಯ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಡಿ.ಎಲ್.ಮಂಜುನಾಥ್, ಡಿ.ಮಂಜುಳಾ ದಂಪತಿಯ ಪುತ್ರಿ ಜ್ಞಾನವಿ. ಕಾಲೇಜಿನ ಹಾಸ್ಟೆಲ್ನಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದರು. ಪ್ರಥಮ ಪಿಯುಸಿಯಲ್ಲಿ 600ಕ್ಕೆ 600 ಅಂಕ ಗಳಿಸಿದ್ದರು.
ಜ್ಞಾನವಿ ಪೋಷಕರು ಬೀಚನಹಳ್ಳಿಯಲ್ಲಿ ಹೋಟೆಲ್ ನಡೆಸುತ್ತಿದ್ದಾರೆ. ಅವರ ಪ್ರೋತ್ಸಾಹ, ಶಿಕ್ಷಕರ ಮಾರ್ಗದರ್ಶನ, ನಿರಂತರ ಶ್ರಮದಿಂದಾಗಿ ಇಡೀ ರಾಜ್ಯದ ಜನರು ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಓದಿನಲ್ಲಿ ಸದಾ ಮುಂದಿದ್ದ ಜ್ಞಾನವಿ ಮೇಲೆ ಪೋಷಕರು ಇಟ್ಟಿದ್ದ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.
ಹಾಸ್ಟೆಲ್ನಲ್ಲಿ ಇದ್ದುಕೊಂಡು ಅಭ್ಯಾಸ ಮಾಡಿದ್ದು ನೆರವಾಯಿತು. ಯಾವುದೇ ಒಂದು ವಿಷಯವನ್ನು ಓದಲು ಕುಳಿತರೆ ಅದು ಪೂರ್ತಿಯಾಗುವ ತನಕ ಬಿಡುತ್ತಿರಲಿಲ್ಲ. ಫಲಿತಾಂಶ ನೋಡಿ ತುಂಬಾ ಖುಷಿಯಾಗಿದೆ. ಮನೆಯಲ್ಲಿ ಹಬ್ಬದ ವಾತಾವರಣ ಇದೆ ಎಂದು ಜ್ಞಾನವಿ ನಗುತ್ತಲೇ ಮಾತನಾಡಿದರು.
ಕಾಲೇಜಿನಲ್ಲಿ ಪರೀಕ್ಷೆಯ ತಯಾರಿಗೆ ಹೆಚ್ಚಿನ ಒತ್ತು ನೀಡುತ್ತಿದ್ದರು. ವಾರ್ಷಿಕ ಪರೀಕ್ಷೆಗೂ ಮುನ್ನ 8 ಪೂರ್ವಭಾವಿ ಪರೀಕ್ಷೆಗಳು ನಡೆಸಿದ್ದರು. ಇದಕ್ಕೆ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದೆ. ಕೊನೆಯ ಪರೀಕ್ಷೆಗೆ ಇದರಿಂದ ಅನುಕೂಲವಾಯಿತು ಎಂದು ತಮ್ಮ ಯಶಸ್ಸಿನ ಗುಟ್ಟು ತಿಳಿಸಿದರು.
ಜ್ಞಾನವಿ ಚಾರ್ಟೆಡ್ ಅಕೌಟೆಂಟ್ ಆಗುವ ಕನಸು ಕಂಡಿದ್ದು, ಇದೇ ಮಾರ್ಗದಲ್ಲಿ ಸಾಗಿದ್ದಾರೆ. ವಿದ್ಯಾವಾಹಿನಿ ಕಾಲೇಜಿನಲ್ಲಿ ಚಾರ್ಟೆಡ್ ಅಕೌಟೆಂಟ್ ಕೋರ್ಸ್ಗೆ ದಾಖಲಾಗುವ ಇಂಗಿತ ವ್ಯಕ್ತಪಡಿಸಿದರು. ಪೋಷಕರು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗುತ್ತಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ತುಮಕೂರಿಗೆ ಬಂದವರು ತಮ್ಮ ಕೆಲಸದಲ್ಲಿ ಶೇ 100ರಷ್ಟು ಯಶಸ್ಸು ಸಾಧಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
In the Commerce stream, Ganavi M from Vidyanidhi PU College, Tumkur, attained the highest position with a remarkable score of 597 marks.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm