ಬ್ರೇಕಿಂಗ್ ನ್ಯೂಸ್
10-04-24 06:19 pm HK News Desk ಕರ್ನಾಟಕ
ವಿಜಯಪುರ, ಏ 10: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ ಕನ್ನಡ ಮಾಧ್ಯಮದಲ್ಲಿ ವಿಜಯಪುರ ನಗರದ ಎಸ್.ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವರಾದ ವೇದಾಂತ ನಾವಿ ವಿಜಯಪುರ ನಗರದ ಶಾಸ್ತ್ರಿನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಎಸ್.ಎಸ್. ಪಿಯು ಕಾಲೇಜಿನಲ್ಲಿ ಓದಿದರು.
ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು ಅಂದಂದೆ ಓದಿಕೊಳ್ಳುತ್ತಿದ್ದೆ’ ಎಂದು ವೇದಾಂತ ತಿಳಿಸಿದರು.
ಪದವಿ ಓದಿದ ಬಳಿಕ ಐಎಎಸ್, ಕೆಎಎಸ್ನಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆದ್ಯತೆ ನೀಡುತ್ತೇನೆ ಎಂದು ಹೇಳಿದರು.
ಕ್ಷೌರಿಕ ಕೆಲಸ ಮಾಡುತ್ತಿದ್ದ ತಂದೆ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡ ಪರಿಣಾಮ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡತನದಲ್ಲೇ ತಾಯಿ, ಅಕ್ಕ ನೀಡಿದ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಿಂದ ಹೆಚ್ಚು ಅಂಕಗಳಿಸಲು ಸಹಾಯವಾಯಿತು ಎಂದು ವೇದಾಂತ ತಿಳಿಸಿದರು.
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವೇದಾಂತ ನಾವಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲ್ ಅವರು ಸಿಹಿ ತಿನ್ನಿಸಿ, ಸನ್ಮಾನಿಸಿ ಶುಭ ಹಾರೈಸಿದರು.
ಕಲಬೀಳಗಿಯ ಬಂಜಾರ ವಿದ್ಯಾ ವರ್ದಕ ಸಂಘದ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಓದಿರುವ ವೇದಾಂತ ನಾವಿ ಶೇ 96.96 ರಷ್ಟು ಅಂಕಗಳಿಸಿ, ಉತ್ತಮ ಸಾಧನೆ ಮಾಡಿದ್ದರು.
The Arts stream of the 2nd PUC annual examination has been conducted in Kannada medium by S.S. Vedanta Gyanoba Navi, a student of PU College, topped the state with 596 marks.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm