ಬ್ರೇಕಿಂಗ್ ನ್ಯೂಸ್
10-04-24 06:19 pm HK News Desk ಕರ್ನಾಟಕ
ವಿಜಯಪುರ, ಏ 10: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ ಕನ್ನಡ ಮಾಧ್ಯಮದಲ್ಲಿ ವಿಜಯಪುರ ನಗರದ ಎಸ್.ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವರಾದ ವೇದಾಂತ ನಾವಿ ವಿಜಯಪುರ ನಗರದ ಶಾಸ್ತ್ರಿನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಎಸ್.ಎಸ್. ಪಿಯು ಕಾಲೇಜಿನಲ್ಲಿ ಓದಿದರು.
ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು ಅಂದಂದೆ ಓದಿಕೊಳ್ಳುತ್ತಿದ್ದೆ’ ಎಂದು ವೇದಾಂತ ತಿಳಿಸಿದರು.
ಪದವಿ ಓದಿದ ಬಳಿಕ ಐಎಎಸ್, ಕೆಎಎಸ್ನಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆದ್ಯತೆ ನೀಡುತ್ತೇನೆ ಎಂದು ಹೇಳಿದರು.
ಕ್ಷೌರಿಕ ಕೆಲಸ ಮಾಡುತ್ತಿದ್ದ ತಂದೆ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡ ಪರಿಣಾಮ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡತನದಲ್ಲೇ ತಾಯಿ, ಅಕ್ಕ ನೀಡಿದ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಿಂದ ಹೆಚ್ಚು ಅಂಕಗಳಿಸಲು ಸಹಾಯವಾಯಿತು ಎಂದು ವೇದಾಂತ ತಿಳಿಸಿದರು.
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವೇದಾಂತ ನಾವಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲ್ ಅವರು ಸಿಹಿ ತಿನ್ನಿಸಿ, ಸನ್ಮಾನಿಸಿ ಶುಭ ಹಾರೈಸಿದರು.
ಕಲಬೀಳಗಿಯ ಬಂಜಾರ ವಿದ್ಯಾ ವರ್ದಕ ಸಂಘದ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಓದಿರುವ ವೇದಾಂತ ನಾವಿ ಶೇ 96.96 ರಷ್ಟು ಅಂಕಗಳಿಸಿ, ಉತ್ತಮ ಸಾಧನೆ ಮಾಡಿದ್ದರು.
The Arts stream of the 2nd PUC annual examination has been conducted in Kannada medium by S.S. Vedanta Gyanoba Navi, a student of PU College, topped the state with 596 marks.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm