ಬ್ರೇಕಿಂಗ್ ನ್ಯೂಸ್
15-04-24 12:11 pm HK News Desk ಕರ್ನಾಟಕ
ಬಾಗಲಕೋಟೆ, ಏ.15: ರಸ್ತೆ ಬದಿ ನಿಂತಿದ್ದವರ ಮೇಲೆ ಮಣ್ಣು ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಬೀಳಗಿ ತಾಲೂಕಿನ ಯತ್ನಟ್ಟಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಬೀಳಗಿ ತಾಲೂಕು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (72), ಅವರ ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (66), ಪುತ್ರ ಪುಂಡಲೀಕ ಯಂಕಪ್ಪ ತೋಳಮಟ್ಟಿ (40), ಪುತ್ರಿ ನಾಗವ್ವ ಅಶೋಕ ಬಮ್ಮನ್ನವರ, ನಾಗವ್ವಳ ಪತಿ ಮತ್ತು ಯಂಕಪ್ಪ ಅವರ ಅಳಿಯ ಅಶೋಕ ನಿಂಗಪ್ಪ ಬಮ್ಮನ್ನವರ (48) ಎಂದು ಗುರುತಿಸಲಾಗಿದೆ.
ಈ ಕುಟುಂಬ ಹೊಲದಲ್ಲಿ ಕೆಲಸ ಮುಗಿಸಿ ಮರಳಿ ತಮ್ಮೂರು ಬಾದರದಿನ್ನಿಗೆ ತೆರಳಲು ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ರಸ್ತೆಯಲ್ಲಿ ಮಣ್ಣು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನದ ಟೈರ್ ಸ್ಪೋಟಗೊಂಡಿದೆ. ಪರಿಣಾಮ ಅಲ್ಲೇ ರಸ್ತೆ ಪಕ್ಕದಲ್ಲಿ ನಿಂತಿದ್ದ ಐವರ ಮೇಲೆ ಪಲ್ಟಿಯಾಗಿದೆ. ಐವರೂ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಬೀಳಗಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಬಾದರದಿನ್ನಿ, ಯತ್ನಟ್ಟಿಯ ನೂರಾರು ಜನರು ಸ್ಥಳಕ್ಕೆ ಧಾವಿಸಿ ರೋಧಿಸಿದರು. ಇನ್ನೇನು 10 ನಿಮಿಷ ಕಳೆದಿದ್ದರೆ, ಅವರೆಲ್ಲ ಮನೆ ಸೇರುವವರಿದ್ದರು. ಆದರೆ, ಯಮನಂತೆ ಬಂದ ಟಿಪ್ಪರ್ ಐವರನ್ನು ಬಲಿ ಪಡೆದಿದೆ.
Bagalkote accident, five killed after truck topples on road after trye blast. Family members were about to reach home in just 10 minutes but suddenly mud truck toppled over them after trye blast.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm