ಬ್ರೇಕಿಂಗ್ ನ್ಯೂಸ್
15-04-24 12:11 pm HK News Desk ಕರ್ನಾಟಕ
ಬಾಗಲಕೋಟೆ, ಏ.15: ರಸ್ತೆ ಬದಿ ನಿಂತಿದ್ದವರ ಮೇಲೆ ಮಣ್ಣು ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಬೀಳಗಿ ತಾಲೂಕಿನ ಯತ್ನಟ್ಟಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಬೀಳಗಿ ತಾಲೂಕು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (72), ಅವರ ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (66), ಪುತ್ರ ಪುಂಡಲೀಕ ಯಂಕಪ್ಪ ತೋಳಮಟ್ಟಿ (40), ಪುತ್ರಿ ನಾಗವ್ವ ಅಶೋಕ ಬಮ್ಮನ್ನವರ, ನಾಗವ್ವಳ ಪತಿ ಮತ್ತು ಯಂಕಪ್ಪ ಅವರ ಅಳಿಯ ಅಶೋಕ ನಿಂಗಪ್ಪ ಬಮ್ಮನ್ನವರ (48) ಎಂದು ಗುರುತಿಸಲಾಗಿದೆ.
ಈ ಕುಟುಂಬ ಹೊಲದಲ್ಲಿ ಕೆಲಸ ಮುಗಿಸಿ ಮರಳಿ ತಮ್ಮೂರು ಬಾದರದಿನ್ನಿಗೆ ತೆರಳಲು ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ರಸ್ತೆಯಲ್ಲಿ ಮಣ್ಣು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನದ ಟೈರ್ ಸ್ಪೋಟಗೊಂಡಿದೆ. ಪರಿಣಾಮ ಅಲ್ಲೇ ರಸ್ತೆ ಪಕ್ಕದಲ್ಲಿ ನಿಂತಿದ್ದ ಐವರ ಮೇಲೆ ಪಲ್ಟಿಯಾಗಿದೆ. ಐವರೂ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಬೀಳಗಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಬಾದರದಿನ್ನಿ, ಯತ್ನಟ್ಟಿಯ ನೂರಾರು ಜನರು ಸ್ಥಳಕ್ಕೆ ಧಾವಿಸಿ ರೋಧಿಸಿದರು. ಇನ್ನೇನು 10 ನಿಮಿಷ ಕಳೆದಿದ್ದರೆ, ಅವರೆಲ್ಲ ಮನೆ ಸೇರುವವರಿದ್ದರು. ಆದರೆ, ಯಮನಂತೆ ಬಂದ ಟಿಪ್ಪರ್ ಐವರನ್ನು ಬಲಿ ಪಡೆದಿದೆ.
Bagalkote accident, five killed after truck topples on road after trye blast. Family members were about to reach home in just 10 minutes but suddenly mud truck toppled over them after trye blast.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm