ಬ್ರೇಕಿಂಗ್ ನ್ಯೂಸ್
17-04-24 06:55 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.17: ಧಾರವಾಡದ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ತೆಯಾದ 18 ಕೋಟಿ ನಗದು ಹಣ ಪ್ರಕರಣದಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯಗೊಂಡಿದ್ದು ಹಣದ ಕಂತೆಯನ್ನು 18 ಬ್ಯಾಗ್ಗಳಲ್ಲಿ ತುಂಬಿಸಿ ಹುಬ್ಬಳ್ಳಿ ಕೇಶ್ವಾಪುರದ ಎಸ್ಬಿಐ ಶಾಖೆಗೆ ರವಾನಿಸಿದ್ದಾರೆ.
ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇದ್ದ ಬಸವರಾಜ್ ದತ್ತುನವರ್ ನಿವಾಸ ಅರ್ನಾ ರೆಸಿಡೆನ್ಸಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದರು. ನಿನ್ನೆಯಿಂದ ಹಣದ ಮಶಿನ್ ತಂದು ಹಣದ ಎಣಿಕೆ ನಡೆಸಿದ್ದು ಇಂದು ಮಧ್ಯಾಹ್ನ ಹೊತ್ತಿಗೆ ಪೂರ್ತಿಯಾಗಿದೆ. ಅಕ್ರಮ ಮದ್ಯ ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆದಿತ್ತು. ಚುನಾವಣಾ ವಿಚಕ್ಷಣ ದಳ ದಾಳಿ ನಡೆಸಿದ್ದು ಈ ವೇಳೆ ದತ್ತೂನವರ ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆಯಾಗಿತ್ತು. ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದರಿಂದ ಐಟಿ ಅಧಿಕಾರಿಗಳು ನಿನ್ನೆ ರಾತ್ರಿಯೇ ಪ್ರಕರಣವನ್ನು ತಮ್ಮ ಸುಪರ್ದಿಗೆ ಪಡೆದಿದ್ದರು. ಹಣ ಎಣಿಸಿ 18 ಬ್ಯಾಗ್ ಗಳಲ್ಲಿ ಪ್ಯಾಕ್ ಮಾಡಿ ಬ್ಯಾಂಕಿಗೆ ಸಾಗಿಸಿದ್ದಾರೆ.

ಇದೇ ವೇಳೆ, ಬಸವರಾಜ್ ದತ್ತುನವರ್ ಅವರನ್ನು ವಿಚಾರಣೆ ನಡೆಸಿದ್ದು ತಾನು ಯು.ಬಿ. ಶೆಟ್ಟಿ ಕನಸ್ಟ್ರಕ್ಷನ್ ಕಂಪನಿಯಲ್ಲಿ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆ ಹುಬ್ಬಳ್ಳಿಯ ಕಂಪನಿ ಕಚೇರಿಯಲ್ಲಿಯೂ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಉದ್ಯಮಿ ಮತ್ತು ಹುಬ್ಬಳ್ಳಿ ಭಾಗದಲ್ಲಿ ಕಂಟ್ರಾಕ್ಟರ್ ಆಗಿರುವ ಯುಬಿ ಶೆಟ್ಟಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದು ಧಾರವಾಡ ಮತ್ತು ಹುಬ್ಬಳ್ಳಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಈ ಹಣ ಕೂಡಿಡಲಾಗಿತ್ತು ಎಂಬ ಆರೋಪಗಳಿವೆ.
ಯು.ಬಿ. ಶೆಟ್ಟಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, 18 ಕೋಟಿ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಣ ಯಾರಿಗೆ ಸೇರಿದ್ದು, ಬಸವರಾಜ್ ದತ್ತುನವರ್ ಮನೆಯಲ್ಲಿ ಹಣ ಹೇಗೆ ಬಂತು? ಅಷ್ಟೊಂದು ದೊಡ್ಡ ಮೊತ್ತದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದು ಏಕೆ? ಇದು ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ.
Income Tax (I-T) officials seized Rs 18 crore during a raid from the house of U B Shetty’s accountant Basavaraja Dutunavar at Aarna Residency near Dasanakoppa Circle here. The seized money was later deposited at State Bank of India (SBI) Keshwapur branch in Hubballi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm