ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm