ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm