ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am