ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm