ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am