ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm