ಬ್ರೇಕಿಂಗ್ ನ್ಯೂಸ್
18-04-24 07:28 pm HK News Desk ಕರ್ನಾಟಕ
ಹುಬ್ಬಳ್ಳಿ, ಏ 18: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.
ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕೆ ಮರ್ಡರ್ :
ಕೊಲೆಯಾದ ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ. ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ, ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು.
In a shocking incident, Neha Hiremath, daughter of councillor of Hubballi Dharwad Municipal Corporation Niranjan Hiremath, was stabbed to death on the campus of her college in Hubballi on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm