ಬ್ರೇಕಿಂಗ್ ನ್ಯೂಸ್
18-04-24 07:28 pm HK News Desk ಕರ್ನಾಟಕ
ಹುಬ್ಬಳ್ಳಿ, ಏ 18: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.
ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕೆ ಮರ್ಡರ್ :
ಕೊಲೆಯಾದ ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ. ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ, ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು.
In a shocking incident, Neha Hiremath, daughter of councillor of Hubballi Dharwad Municipal Corporation Niranjan Hiremath, was stabbed to death on the campus of her college in Hubballi on Thursday.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm