ಬ್ರೇಕಿಂಗ್ ನ್ಯೂಸ್
19-04-24 11:17 pm HK NEWS ಕರ್ನಾಟಕ
ಹುಬ್ಬಳ್ಳಿ , ಏ 19: ವಿದ್ಯಾರ್ಥಿನಿ ಕೊಲೆ ಘಟನೆ ಖಂಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಕಾಲೇಜು ಕ್ಯಾಂಪಸ್ಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಾಡ ಹಗಲೇ ಕೊಲೆ ಪ್ರಕರಣ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಘಟನೆ ಕುರಿತು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಾಳಿ ಬದುಕಬೇಕಿದ್ದ ವಿದ್ಯಾರ್ಥಿನಿಯನ್ನು ಯುವಕ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಯುವಕ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದು, ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕೊಲೆ ಆರೋಪಿ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಬೇಕು. ಅಲ್ಲದೇ ಆತನ ಕುಟುಂಬದವರನ್ನು ಬಹಿಷ್ಕರಿಸುವಂತೆ ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಬೇಕು. ಆರೋಪಿ ಪರವಾಗಿ ಕೋರ್ಟ್ನಲ್ಲಿ ಯಾರೂ ವಕಾಲತ್ತು ವಹಿಸಬಾರದು ಎಂದು ಮುತಾಲಿಕ್ ಆಗ್ರಹಿಸಿದರು.

ಮನೆ ಬಿಟ್ಟು ಹೊರಗೆ ಬಾರದಂಥಾ ಪರಿಸ್ಥಿತಿ ಇದೆ: ಯತ್ನಾಳ್
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಮನೆ ಬಿಟ್ಟು ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಶಾಸಕ ಯತ್ನಾಳ್ ಆರೋಪ ಮಾಡಿದರು. ಹತ್ಯೆಯಾದ ನೇಹಾ ನಿರಂಜನ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೊಲೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಪರಮೇಶ್ವರ್ ಬೇಜವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.
Hubballi Neha Murder, Pramod Muthalik demands to destroy the house of the accused. The way he has stabbed her, it seems like he has taken ISIS training. Meanwhile, Yatnal also visited the house of Neha and expressed his condolences to the family.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm