ಬ್ರೇಕಿಂಗ್ ನ್ಯೂಸ್
20-04-24 02:30 pm HK News Desk ಕರ್ನಾಟಕ
ಹುಬ್ಬಳ್ಳಿ, ಏ 20: ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ. ನೇಹಾಳ ತಂದೆ - ತಾಯಿಗೂ ನಾನು ಕ್ಷಮೆ ಕೇಳುತ್ತೇನೆ. ನೇಹಾ ಕೂಡ ನನ್ನ ಮಗಳು ಇದ್ದಂಗೆ, ನನ್ನ ಮಗ ಮಾಡಿರುವ ತಪ್ಪಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಫಯಾಜ್ ತಾಯಿ ಮುಮ್ತಾಜ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೇಹಾಳ ತಂದೆ-ತಾಯಿಗೆ ಆಗಿರುವಷ್ಟೇ ದುಃಖ ನನಗೂ ಆಗಿದೆ. ಯಾರು ಮಾಡಿದ್ರೂ ತಪ್ಪೇ ತಪ್ಪು, ನನ್ನ ಮಗ ಮಾಡಿರೋದು ತಪ್ಪೇ. ಈ ನೆಲದ ಕಾನೂನು ಏನು ಶಿಕ್ಷೆ ಕೊಡುತ್ತೋ ಅದನ್ನು ಕೊಡಬೇಕು. ನಾನು ನೂರಾರು ಮಕ್ಕಳಿಗೆ ತಪ್ಪು ಮಾಡಿದ್ರೆ ಶಿಕ್ಷೆ ಕೊಡ್ತೀನಿ, ಅದೇ ರೀತಿ ಅವನಿಗೂ ಶಿಕ್ಷೆಯಾಗಬೇಕು. ಅವನು ಮಾಡಿರೋ ಕೆಲಸದಿಂದ ನಾನು ಎಲ್ಲರ ಮುಂದೆ ತಲೆ ತಗ್ಗಿಸುವ ರೀತಿ ಆಗಿದೆ. ನಾನು ಇಡೀ ರಾಜ್ಯದ ಜನತೆಗೆ ಕ್ಷಮೆ ಕೇಳ್ತೀನಿ ಎಂದು ಹೇಳಿದರು.

ನನ್ನ ಮಗ ಹಾಗೂ ನೇಹಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ನನಗೆ ಒಂದು ವರ್ಷದ ಹಿಂದೆಯೇ ಈ ವಿಷಯ ಗೊತ್ತಾಗಿತ್ತು. ಫಯಾಜ್ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಯೂನಿವರ್ಸಿಟಿ ಬ್ಲೂ ಆದಾಗ ನೇಹಾ ಪರಿಚಯ ಆಗಿ, ಅದು ಪ್ರೀತಿಗೆ ತಿರುಗಿತ್ತು. ಅದನ್ನು ನನಗೆ ಹೇಳಿದ್ದ. ಆಗ ನಾನು ಈ ಪ್ರೀತಿ, ಗೀತಿ ಬೇಡ ಎಂದು ಹೇಳಿದ್ದೆ. ಆದರೆ, ಈ ರೀತಿ ಆಯ್ತು ಎಂದು ತಿಳಿಸಿದರು.
ಫಯಾಜ್ ಬುದ್ಧಿವಂತ ಹುಡುಗ ಇದ್ದ, ಅವನನ್ನು ಐಎಎಸ್ ಆಫೀಸರ್ ಮಾಡ್ಬೇಕು ಅನ್ಕೊಂಡಿದ್ದೆ. ಆದರೆ, ಈ ಪ್ರೀತಿಯಲ್ಲಿ ಬಿದ್ದು ಜೀವನವನ್ನು ಹಾಳು ಮಾಡಿಕೊಂಡ ಎಂದ ಅವರು, ನೇಹಾಳೇ ಫಯಾಜ್ಗೆ ಮೊದಲು ಪ್ರಪೋಸ್ ಮಾಡಿದ್ದಳು. ಅವರಿಬ್ಬರ ನಡುವೆ ಪ್ರೀತಿ ಇತ್ತು, ಅದು ಒನ್ ಸೈಡ್ ಲವ್ ಅಲ್ಲ, ಇಬ್ಬರ ಕಡೆಯಿಂದಲೂ ಪ್ರೀತಿ ಇತ್ತು. ಆ ಹುಡುಗಿನೂ ಒಳ್ಳೆ ಹುಡುಗಿ, ಇಬ್ಬರು ಕೂಡ ಮದುವೆ ಆಗ್ತೀವಿ ಅಂದಿದ್ರು ಎಂದು ಹೇಳಿದರು.
Hubballi Murder, Neha was the one who proposed my son says accused son Fayaz mother Mamtaz. Speaking to mediapersons in Dharwad on April 20, Fayaz’s mother, Mamtaz, a teacher, has demanded strict punishment as per the law of the land. She was deeply shocked by the developments that had led to Neha’s murder. “It is great injustice to Neha and her family..
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm