ಬ್ರೇಕಿಂಗ್ ನ್ಯೂಸ್
01-12-20 09:37 pm Dilip: Bengaluru Correspondent ಕರ್ನಾಟಕ
ಬೆಂಗಳೂರು, ಡಿ.1: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಃ ಬೆಳ್ಳಂದೂರು ಠಾಣೆಗೆ ಆಗಮಿಸಿರುವ ವರ್ತೂರು ಪ್ರಕಾಶ್, ಡ್ರೈವರ್ ಜೊತೆಗೆ ಇದ್ದಾಗ ಕೆಲವರು ನಮ್ಮ ಕಾರಿನಲ್ಲೇ ನಮ್ಮನ್ನು ಅಪಹರಿಸಿದ್ದರು. ಅಲ್ಲದೆ, ನಮ್ಮ ಮೇಲೆ ಹಲ್ಲೆ ನಡೆಸಿ 30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಆದರೆ, ನಾನು ಹೇಗೋ ಅವರಿಂದ ತಪ್ಪಿಸಿಕೊಂಡೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನವೆಂಬರ್ 25 ರಂದು ನಮ್ಮನ್ನು 7 ರಿಂದ 8 ಜನ ಅಪಹರಿಸಿದ್ದಾರೆ. ಅಪಹರಣದ ನಂತರ ಮೂರು ದಿನ ನನ್ನನ್ನು ಕೂಡಿ ಹಾಕಲಾಗಿತ್ತು. ಆದರೆ, ಎಲ್ಲಿ ಕೂಡಿ ಹಾಕಿದ್ದರು ಎಂಬುದು ಗೊತ್ತಿಲ್ಲ. ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ನನ್ನ ಡ್ರೈವರ್ಗೂ ತುಂಬಾ ಗಾಯಗಳಾಗಿವೆ. 28ರಂದು ನಾನು ಹಾಗೂ ಡ್ರೈವರ್ ತಪ್ಪಿಸಿಕೊಂಡು ಬಂದಿದ್ದೇವೆ. ಆದರೆ, ನಮ್ಮ ಕಾರನ್ನು ಕಿಡ್ನಾಪರ್ಸ್ ಇದ್ದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದೀವಿ ಎಂದು ಉಲ್ಲೇಖಿಸಲಾಗಿದೆ.
ವರ್ತೂರು ಪ್ರಕಾಶ್ ಕೊಟ್ಟ ದೂರಿನನ್ವಯ ಬೆಳ್ಳಂದೂರು ಪೊಲೀಸರು ಇದೀಗ ಐಪಿಸಿ ಸೆಕ್ಷನ್ 341 ಅಕ್ರಮ ತಡೆ , 342 ಅಕ್ರಮ ಬಂಧನ, 307 ಕೊಲೆ ಯತ್ನ, 364 ಅಪಹರಣ, 364(A) ಅಪಹರಿಸಿ ಹಣಕ್ಕಾಗಿ ಬೇಡಿಕೆ ಮತ್ತು 324 ಹಲ್ಲೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಮಾಜಿ ಸಚಿವರೊಬ್ಬರ ಅಪಹರಣದ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Shocking Former Karnataka Minister Varthur Prakash alleges of kidnap and extortion, files complaint at Bellandur Police station in Bangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm