ಬ್ರೇಕಿಂಗ್ ನ್ಯೂಸ್
23-04-24 07:50 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.23: ಇತ್ತೀಚೆಗೆ ಕೊಲೆಯಾದ ಕಾಲೇಜು ಯುವತಿ ನೇಹಾ ಅವರ ತಂದೆ ನಿರಂಜನ ಹಿರೇಮಠ ಜೊತೆ ಸಿಎಂ ಸಿದ್ದರಾಮಯ್ಯ ಫೋನ್ ಮೂಲಕ ಮಾತನಾಡಿ, "ವೆರಿ ಸ್ವಾರಿ. ನಾವು ನಿಮ್ಮ ಜೊತೆ ಇರ್ತೀವಿ" ಎಂದು ಧೈರ್ಯ ತುಂಬಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರು ನಿರಂಜನ ಹಿರೇಮಠ ಅವರ ಮನೆಗೆ ಭೇಟಿ ನೀಡಿದ ವೇಳೆ ಸಿಎಂ ಫೋನ್ ಮೂಲಕ ಮಾತನಾಡಿದ್ದಾರೆ.
ಬಳಿಕ ಪ್ರತಿಕ್ರಿಯಿಸಿದ ನಿರಂಜನ ಹಿರೇಮಠ, "ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಕ್ಕೆ ಸಮಾಧಾನವಿದೆ. ಸ್ಪೆಷಲ್ ಕೋರ್ಟ್ ವಿಚಾರಕ್ಕೂ ಸಮಾಧಾನ ತರಿಸಿದೆ. ಸಿಎಂಗೆ ಧನ್ಯವಾದ" ಎಂದರು.

ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯಿಸಿ, ''ನ್ಯಾಯದಾನ ವಿಳಂಬವಾಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಇವತ್ತು ಉಚ್ಛ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತದೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲು ಆಗಿಲ್ಲ. ಹೀಗಾಗಿ, ನಿರಂಜನ್ ಹಿರೇಮಠ ಅವರೊಂದಿಗೆ ಫೋನ್ನಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದಾರೆ'' ಎಂದು ತಿಳಿಸಿದರು.
ತಪ್ಪು ಮಾಹಿತಿಯಿಂದ ಮಾತನಾಡಿದ್ದೇನೆ ;
"ನನ್ನ ಮಗಳ ಕೊಲೆ ಪ್ರಕರಣದಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿದೆ. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ. ಪೊಲೀಸ್ ಆಯುಕ್ತರ ವಿರುದ್ಧವೂ ಮಾತನಾಡಿದ್ದೇನೆ. ದುಃಖದಲ್ಲಿ ಮಾಹಿತಿ ಕೊರತೆಯಿಂದ ಮಾತನಾಡಿದ್ದೆ" ಎಂದು ತಂದೆ ನಿರಂಜನ ಹಿರೇಮಠ ಇದೇ ಸಂದರ್ಭದಲ್ಲಿ ಹೇಳಿದರು.

10-12 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ;
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಈಗಾಗಲೇ ಸಿಒಡಿಗೆ ಒಪ್ಪಿಸಿದ್ದು 10-12 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನೇಹಾ ಹತ್ಯೆ ಪ್ರಕರಣವನ್ನು ಸಿಒಡಿಗೆ ವಹಿಸುವ ಸಂಬಂಧ ಮುಖ್ಯಮಂತ್ರಿಗಳು ಮತ್ತು ನಾನು ಚರ್ಚಿಸಿ ತೀರ್ಮಾನ ಕೈಗೊಂಡಿದ್ದು, ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿಗೆ ತೆರಳಿ ಪೊಲೀಸರಿಂದ ನೇಹಾ ಹತ್ಯೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದರು.
ನೇಹಾ ಹತ್ಯೆ ಹಿಂದೆ ಯಾರದೇ ಕೈವಾಡ ಇದ್ದರೂ, ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸಿಒಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹತ್ಯೆಯಾಗಿರುವ ನೇಹಾ ತಂದೆ-ತಾಯಿಗೆ ನ್ಯಾಯ ಸಿಗುವ ವಿಶ್ವಾಸ ನನಗಿದೆ. ತನಿಖೆಯ ನಂತರ ಸತ್ಯಾಂಶವೂ ಹೊರಗೆ ಬರಲಿದೆ ಎಂದ ಅವರು, ನನ್ನ ಹೇಳಿಕೆಯಿಂದ ಏನಾದರೂ ನೇಹಾ ತಂದೆ-ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆಂದು ಪುನರುಚ್ಚರಿಸಿದರು.
Karnataka Chief Minister Siddaramaiah on Tuesday spoke to the father of slain student Neha Hiremath over the phone and said "sorry" over his daughter's killing and assured that "we will be on your side."
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm