ಬ್ರೇಕಿಂಗ್ ನ್ಯೂಸ್
23-04-24 10:46 pm HK News Desk ಕರ್ನಾಟಕ
ಚಿತ್ರದುರ್ಗ, ಏ 23: ದೇಶದ ಅತಿ ದೊಡ್ಡ ನಾಯಕ ನೈತಿಕತೆಯನ್ನು ತೊರೆದು ಜನರ ಮುಂದೆ ನಾಟಕವಾಡುತ್ತಿದ್ದಾರೆ ಮತ್ತು ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿ ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ. ಸತ್ಯದ ಹಾದಿಯಲ್ಲಿ ನಡೆಯೋದು ಹಿಂದೂ ಧರ್ಮದ ಪರಂಪರೆ. ಶ್ರೀರಾಮ, ಗಾಂಧೀಜಿ, ಇತರೆ ಪ್ರಧಾನಿಗಳು ಸೇವಾಭಾವದಿಂದ ನಡೆದರು. ಆದರೆ ಮೋದಿ ಸರ್ಕಾರದಲ್ಲಿ ಕೇವಲ ಸುಳ್ಳಿನ ಕಂತೆಯೇ ಇದೆ ಎಂದು ಕಿಡಿಕಾರಿದರು.
ಪ್ರಧಾನಿ ತಪ್ಪು ದಾರಿಯಲ್ಲಿ ನಡೆದು, ವಿವಿಧ ರಾಜ್ಯಗಳಲ್ಲಿ ಸರ್ಕಾರಗಳನ್ನು ಬೀಳಿಸುತ್ತಾರೆ. ನೂರಾರು ಕೋಟಿ ರೂ. ಹಣ ಕೊಟ್ಟು ಶಾಸಕರನ್ನು ಖರೀದಿ ಮಾಡುತ್ತಾರೆ. ಚುನಾವಣೆ ವೇಳೆ ಅಭಿವೃದ್ಧಿ ವಿಚಾರ ಬಿಟ್ಟು ಜನರ ಭಾವನೆ ಕೆರಳಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಹೇಳಿದರು.
ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಅವರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿಸುತ್ತಾರೆ ಮತ್ತು ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗಟ್ಟುವ ಮೂಲಕ ದುರ್ಬಲಗೊಳಿಸುವ ಯತ್ನ ನಡೆಸಿದರು ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು.
ಈಗ ರದ್ದುಗೊಂಡಿರುವ ಚುನಾವಣಾ ಬಾಂಡ್ಗಳ ಯೋಜನೆ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕಿ, ದಾಳಿಗೊಳಗಾದ ಕಂಪನಿಗಳು ಬಿಜೆಪಿಗೆ ನೂರಾರು ಕೋಟಿ ರೂ. ದೇಣಿಗೆ ನೀಡಿವೆ ಮತ್ತು ನಂತರ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಗಿದೆ. ನೋಟು ಅಮಾನ್ಯೀಕರಣದ ಮೂಲಕ ಕಪ್ಪುಹಣವನ್ನು ಬಿಳಿಯಾಗಿಸಿ ಬಿಜೆಪಿ ಖಾತೆಗೆ ಜಮಾ ಮಾಡಿದ್ದು ಹೇಗೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಟೀಕಿಸಿದರು.
ಎಸ್ಸಿ ಎಸ್ಟಿಗಳಿಗೆ ಪ್ರತ್ಯೇಕ ಬಜೆಟ್ ಮಂಡನೆ ;
ಇದೇ ವೇಳೆ, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಎಸ್ಸಿ ಎಸ್ಟಿ ವರ್ಗಗಳಿಗೆ ವಿಶೇಷ ಬಜೆಟ್ ನೀಡಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಘೋಷಿಸಿದರು. ಸಂವಿಧಾನ ಬದಲಾವಣೆ ಮಾಡಿ 50%ಕ್ಕಿಂತಲೂ ಹೆಚ್ಚು ತಿದ್ದುಪಡಿ ಮಾಡಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಆಶ್ವಾಸನೆ ನೀಡಿದರು.
ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕೊಡಲಾಗುತ್ತದೆ ಎಂದು ತಿಳಿಸಿದ ಅವರು, ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದಾಗ ಜಿಎಸ್ಟಿ ರದ್ದುಗೊಳಿಸಲಾಗುವುದು. ಕೃಷಿಗಾಗಿ ಹೊಸ ನೀತಿ ಮಾಡಲಾಗುತ್ತದೆ. ರೈತರಿಗೆ ನೇರವಾಗಿ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ, ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು
Congress General Secretary Priyanka Gandhi Vadra on Tuesday targeted Prime Minister Narendra Modi, alleging that "the biggest leader of the country has given up morality, does drama before people and does not walk on the path of truth."
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:58 pm
HK News Desk
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm