ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm